ರಾಜ್ಯಪಾಲ ವಜುಭಾಯಿ ವಾಲಾ ಮುಂದಿನ ಕ್ರಮ ಏನು?

Published : Jul 07, 2019, 07:36 AM IST
ರಾಜ್ಯಪಾಲ ವಜುಭಾಯಿ ವಾಲಾ ಮುಂದಿನ ಕ್ರಮ ಏನು?

ಸಾರಾಂಶ

ರಾಜ್ಯ ಮೈತ್ರಿಯ ಪಡೆಯ 12 ಶಾಸಕರು ದಿಢೀರ್ ರಾಜೀನಾಮೆ ನೀಡಿದ್ದು, ರಾಜ್ಯಪಾಲರ ಮುಂದಿನ ನಡೆ ಅತ್ಯಂತ ಪ್ರಮುಖವಾಗಿರಲಿದೆ.

ಬೆಂಗಳೂರು [ಜು.07] :  ಆಡಳಿತಾರೂಢ ಪಕ್ಷಗಳ ಶಾಸಕರ ರಾಜೀನಾಮೆ ಪರ್ವ ಮುಂದುವರೆದಂತೆ ರಾಜ್ಯಪಾಲರ ಪಾತ್ರ ಮಹತ್ವದ್ದಾಗಿ ಪರಿಣಮಿಸಲಿದೆ.

ಶಾಸಕರ ರಾಜೀನಾಮೆ ಅಂಗೀಕಾರಗೊಳ್ಳದೆ ವಿಳಂಬವಾದಲ್ಲಿ ಅಥವಾ ಹೈಡ್ರಾಮಾಗಳು ನಡೆದಲ್ಲಿ ಆಗ ರಾಜ್ಯಪಾಲರು ಮಧ್ಯೆ ಪ್ರವೇಶ ಮಾಡುವುದು ನಿಶ್ಚಿತ. ಶನಿವಾರ ರಾಜೀನಾಮೆ ನೀಡಿರುವ 12 ಶಾಸಕರು ಮತ್ತು ಹಿಂದೆ ನೀಡಿದ ಆನಂದ್‌ ಸಿಂಗ್‌ ಅವರ ರಾಜೀನಾಮೆ ಪತ್ರಗಳ ಬಗ್ಗೆ ಸ್ಪೀಕರ್‌ ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ರಾಜ್ಯಪಾಲ ವಜುಭಾಯಿ ವಾಲಾ ಅವರು ಕಾದು ನೋಡಬಹುದು.

ಮಂಗಳವಾರ ತಾವು ಶಾಸಕರ ರಾಜೀನಾಮೆ ಪತ್ರಗಳನ್ನು ಪರಿಶೀಲಿಸುವುದಾಗಿ ಸ್ಪೀಕರ್‌ ರಮೇಶ್‌ಕುಮಾರ್‌ ಅವರು ಹೇಳಿರುವುದರಿಂದ ಅಲ್ಲಿವರೆಗೆ ಕಾದು ನೋಡಬಹುದು. ಇದನ್ನು ಪ್ರತಿಪಕ್ಷ ಬಿಜೆಪಿ ಕೂಡ ಕಾದು ನೋಡುತ್ತಿದೆ. ಸ್ಪೀಕರ್‌ ಅವರು ರಾಜೀನಾಮೆ ಅಂಗೀಕರಿಸುವುದನ್ನು ವಿಳಂಬ ಮಾಡುವ ಸಾಧ್ಯತೆ ಕಂಡು ಬಂದಲ್ಲಿ ಸಹಜವಾಗಿ ಪ್ರತಿಪಕ್ಷ ಬಿಜೆಪಿ ರಾಜ್ಯಪಾಲರ ಮೊರೆ ಹೋಗುವ ಸಂಭವವಿದೆ.

ಹಾಗಾದಾಗ ರಾಜ್ಯಪಾಲರು ತಮ್ಮನ್ನೂ ಶಾಸಕರು ಭೇಟಿ ಮಾಡಿ ರಾಜೀನಾಮೆ ಪ್ರತಿಯನ್ನು ನೀಡಿರುವುದರಿಂದ ಈ ಕುರಿತು ಸ್ಪೀಕರ್‌ ಅವರನ್ನು ವಿಚಾರಿಸಬಹುದು. ಆಗಲೂ ಪ್ರಯೋಜನವಾಗದಿದ್ದರೆ ಬಿಜೆಪಿ ದೂರು ನೀಡಿದಲ್ಲಿ ಇದೇ ತಿಂಗಳ 12ರಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗುವುದರಿಂದ ಮೊದಲ ದಿನವೇ ವಿಶ್ವಾತಮತ ಯಾಚಿಸಿ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಮುಖ್ಯಮಂತ್ರಿಗಳಿಗೇ ಸೂಚಿಸಬಹುದು ಎಂದು ತಿಳಿದು ಬಂದಿದೆ.

ಒಂದು ವೇಳೆ ಪರಿಸ್ಥಿತಿ ತೀರಾ ಗೊಂದಲಮಯವಾದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಶಿಫಾರಸು ಮಾಡುವ ಅವಕಾಶವೂ ರಾಜ್ಯಪಾಲರ ಮುಂದಿರುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಬರಿಮಲೆ ದೇಗುಲದ ಬಂಗಾರ ಕಳವು ಪ್ರಕರಣ, ಬಳ್ಳಾರಿ ಚಿನ್ನದ ವ್ಯಾಪಾರಿ ಗೋವರ್ಧನ್ ಕೇರಳದಲ್ಲಿ ಬಂಧನ!
ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರನ ₹8 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ!