ಜಯಾ ಅನಾರೋಗ್ಯ: ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಗ್ರಹ

Published : Oct 01, 2016, 12:13 PM ISTUpdated : Apr 11, 2018, 01:05 PM IST
ಜಯಾ ಅನಾರೋಗ್ಯ: ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಗ್ರಹ

ಸಾರಾಂಶ

ಚೆನ್ನೈ (ಅ.01): ತಮಿಳುನಾಡು ಮುಖ್ಯಮಂತ್ರಿ  ಜಯಲಲಿತಾ ಅನಾರೋಗ್ಯ ವಿಚಾರವು ಈಗ ರಾಷ್ಟ್ರಪತಿ ಭವನದ ಮೆಟ್ಟಿಲೇರಿದೆ. ಜಯಲಲಿತಾ ಆರೋಗ್ಯ ಸ್ಥಿತಿ ಹೇಗಿದೆ ಎಂಬ ವಿವರವನ್ನು ರಾಜ್ಯಪಾಲರಿಂದ ತರಿಸಿಕೊಳ್ಳಿ ಎಂದು ಸುಪ್ರೀಂಕೋರ್ಟ್ ವಕೀಲ ರೀಗನ್ ಬೆಲ್ ಎಂಬವರು ಮನವಿ ಮಾಡಿದ್ದಾರೆ.

ಜಯಲಲಿತಾ ಆರೋಗ್ಯದ ಬಗ್ಗೆ ಗಾಳಿಮಾತುಗಳೇ ಹರಿದಾಡುತ್ತಿವೆ, ಅವರ ದೇಹಸ್ಥಿತಿಯ ವಿವರವನ್ನು ರಹಸ್ಯವಾಗಿಟ್ಟುಕೊಳ್ಳಲಾಗಿದೆ ಹಾಗೂ  ರಾಜ್ಯಪಾಲರು, ಸರ್ಕಾರದ ಸಚಿವರಿಗೂ ಸಿಎಂ ಜಯಲಲಿತಾ ಭೇಟಿ ಸಾಧ್ಯವಾಗುತ್ತಿಲ್ಲ ಎಂದು ರೀಗನ್ ಬೆಲ್ ಹೇಳಿದ್ದಾರೆ.

ಆ ಕಾರಣದಿಂದಾಗಿ ರಾಜ್ಯದ ಆಡಳಿತ ವ್ಯವಸ್ಥೆ ಹತೋಟಿ ತಪ್ಪುತ್ತಿದೆ ಎಂದಿರುವ ರೀಗನ್ ಬೆಲ್, ಗೊಂದಲ ನಿವಾರಣೆಗೆ ರಾಜ್ಯಪಾಲರು ಮಧ್ಯಪ್ರವೇಶಿಸಬೇಕು ಎಂದು ರಾಷ್ಟ್ರಪತಿ ಭವನಕ್ಕೆ ವಕೀಲ ರೀಗನ್ ಬೆಲ್ ಮನವಿ ಸಲ್ಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!