ಚರ್ಚೆಯಾಗದೇ ಅಂಗೀಕಾರವಾಗಿದ್ದ ಸರ್ಕಾರದ ಮಹತ್ವದ ವಿಧೇಯಕ ತಿರಸ್ಕರಿಸಿದ ರಾಜ್ಯಪಾಲ

Published : Oct 04, 2016, 05:46 AM ISTUpdated : Apr 11, 2018, 12:42 PM IST
ಚರ್ಚೆಯಾಗದೇ ಅಂಗೀಕಾರವಾಗಿದ್ದ ಸರ್ಕಾರದ ಮಹತ್ವದ ವಿಧೇಯಕ ತಿರಸ್ಕರಿಸಿದ ರಾಜ್ಯಪಾಲ

ಸಾರಾಂಶ

ಬೆಂಗಳೂರು(ಅ.04): ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯಪಾಲರು ಮತ್ತೊಮ್ಮೆ ಟಾಂಗ್ ಕೊಟ್ಟಿದ್ದಾರೆ. ರಾಜ್ಯ ಸರ್ಕಾರದ ಮಹತ್ವದ ರಿಯಲ್ ಎಸ್ಟೇಟ್ ವಿಧೇಯಕವನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ.

ನಗರಾಭಿವೃದ್ಧಿ ಪ್ರಾಧಿಕಾರಗಳ ತಿದ್ದುಪಡಿ ವಿಧೇಯಕ-2016ರ ಬಿಲ್​​ಗೆ ಅಂಕಿತ ಹಾಕಿಲ್ಲ. ಬಿಲ್ ತಿರಸ್ಕಾರದಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ ಆಗಿದೆ. ಯಾವುದೇ ಚರ್ಚೆಯಾಗದೇ ಅಂಗೀಕಾರವಾಗಿದ್ದ ಈ  ವಿಧೇಯಕಕ್ಕೆ ಅಂಕಿತ ಹಾಕಬಾರದು, ಇದು ರಿಯಲ್ ಎಸ್ಟೇಟ್ ಉದ್ದಿಮೆ ಪರ ಬಿಲ್ ಅಂತ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದರು. ಜೊತೆಗೆ ರಾಜ್ಯಪಾಲರಿಗೂ ಶೆಟ್ಟರ್​ ಪತ್ರ ಬರೆದಿದ್ದರು.

ಬಿಲ್ ಜಾರಿಯಾದರೆ ಪರಿಸರಕ್ಕೆ ಕೊಡಲಿಯೇಟು ಬೀಳುತ್ತದೆ ಎಂದೂ ಶೆಟ್ಟರ್​​ ಪತ್ರದಲ್ಲಿ ವಿವರಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೂಪಾಯಿ ಕುಸಿದರೂ ಪ್ರಗತಿಯತ್ತ ಭಾರತ: ನಿಜಕ್ಕೂ ಏನಾಗುತ್ತಿದೆ?‌
87 ವರ್ಷದ ಪ್ರಸಿದ್ಧ ಪೇಂಟರ್ ಮಗುವಿಗೆ ತಾಯಿಯಾದ 37 ವರ್ಷದ ಪತ್ನಿ, ಉಳಿದ ಮಕ್ಕಳೊಂದಿಗೆ ಬಂಧವೇ ಕಟ್