ಸಚಿವರು ಹಾಗೂ ರಾಜ್ಯಪಾಲರ ನಡುವೆ ಜಟಾಪಟಿ !

Published : Mar 17, 2017, 09:00 AM ISTUpdated : Apr 11, 2018, 12:46 PM IST
ಸಚಿವರು ಹಾಗೂ ರಾಜ್ಯಪಾಲರ ನಡುವೆ ಜಟಾಪಟಿ !

ಸಾರಾಂಶ

ವಿವಿ ಸ್ಥಳಾಂತರಕ್ಕೆ ಸಿಂಡಿಕೇಟ್ ಮೇಲೆ ಸಚಿವ ಡಿಕೆಶಿ ಒತ್ತಡ ಹೇರಿದ ಕಾರಣ ಸಿಂಡಿಕೇಟ್'ನಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು.

ಬೆಂಗಳೂರು(ಮಾ.17): ರಾಜ್ಯಪಾಲ ವಜುಭಾಯಿ ಆರ್ ವಾಲಾ ಹಾಗೂ ಇಂಧನ ಸಚಿವ ಡಿ.ಕೆ. ಶಿವಕುಮಾರ್ ನಡುವೆ ರಾಜೀವ್ ಗಾಂಧಿ ಆರೋಗ್ಯ ವಿವಿ ಸ್ಥಳಾಂತರಕ್ಕೆ ಸಂಬಂಧಿಸಿದಂತೆ ಜಟಾಪಟಿ ಶುರುವಾಗಿದೆ.

ರಾಜೀವ್ ಗಾಂಧಿ ಆರೋಗ್ಯ ವಿವಿಯನ್ನು ಬೆಂಗಳೂರಿನಿಂದ ರಾಮನಗರಕ್ಕೆ ಸ್ಥಳಾಂತರಿಸುವಂತೆ ರಾಜ್ಯಪಾಲರಿಗೆ ಒತ್ತಡ ಹಾಕಿದ್ದರು ಎನ್ನಲಾಗಿದೆ. ಆದರೆ ಒತ್ತಡಕ್ಕೆ ಮಣಿಯದ ರಾಜ್ಯಪಾಲರು ಮಾರ್ಚ್ 14 ರಂದು ವಿವಿ ಕುಲಪತಿಗೆ ಪತ್ರ ಬರೆದು ಕಟ್ಟಡಗಳ ನಿರ್ಮಾಣ ಪ್ರಗತಿ, ಸೌರ್ಯಗಳ ವರದಿ ಸಲ್ಲಿಸಲು ಸೂಚನೆ ನೀಡಿದ್ದಾರೆ.

ವಿವಿ ಸ್ಥಳಾಂತರಕ್ಕೆ ಸಿಂಡಿಕೇಟ್ ಮೇಲೆ ಸಚಿವ ಡಿಕೆಶಿ ಒತ್ತಡ ಹೇರಿದ ಕಾರಣ ಸಿಂಡಿಕೇಟ್'ನಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ರಾಜೀವ್ ಗಾಂಧಿ ಆರೋಗ್ಯ ವಿವಿ ಸ್ಥಳಾಂತರಕ್ಕೆ ವಿವಿಯಲ್ಲೇ ವಿರೋಧವಿತ್ತು. ಸ್ಥಳಾಂತರಕ್ಕೆ ಉತ್ಸುಕತೆಯಲ್ಲಿದ್ದ ಇಂಧನ ಸಚಿವ ಡಿ.ಕೆ.ಶಿವಕುಮಾರ್​​ಗೆ ಹಿನ್ನಡೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಸಂಗಮ: ಶ್ರೀ ಶ್ರೀ ರವಿಶಂಕರ್ ನೇತೃತ್ವದಲ್ಲಿ 1.21 ಕೋಟಿ ಜನರಿಂದ ಏಕಕಾಲಕ್ಕೆ ಧ್ಯಾನ!
ಶೇಖ್ ಹಸೀನಾ ವಿರೋಧಿ ಬಣದ ಮತ್ತೊಬ್ಬ ನಾಯಕನ ಮೇಲೆ ಬಾಂಗ್ಲಾದಲ್ಲಿ ದಾಳಿ, ಮನೆಯ ಒಳಗಿದ್ದಾಗಲೇ ತಲೆಗೆ ಬಿತ್ತು ಗುಂಡು!