
ನವದೆಹಲಿ[ಜು.28]: ವಿವಿಧ ಅಭಿವೃದ್ಧಿ ಕಾರ್ಯಗಳಿಗಾಗಿ ಕೇಂದ್ರ ಸರ್ಕಾರ ಕಳೆದ 5 ವರ್ಷಗಳಲ್ಲಿ 1 ಕೋಟಿಗೂ ಅಧಿಕ ಮರಗಳನ್ನು ಕಡಿಯಲು ಅನುಮತಿ ನೀಡಿರುವುದು ಬೆಳಕಿಗೆ ಬಂದಿದೆ. ಈ ಪೈಕಿ 2018-19 ರಲ್ಲಿ ಅತಿಹೆಚ್ಚು ಅಂದರೆ 26.91 ಲಕ್ಷ ಮರಗಳ ಹನನಕ್ಕೆ ಹಸಿರು ನಿಶಾನೆ ತೋರಿದೆ.
‘2014 ರಿಂದ 2019ರ ವರೆಗೂ ಅಭಿವೃದ್ಧಿ ಕಾರ್ಯಗಳಿಗಾಗಿ 1.09 ಕೋಟಿ ಮರಗಳನ್ನು ಕಡಿಯಲು ಸರ್ಕಾರ ಅನುಮತಿ ನೀಡಿದೆ’ ಎಂದು ಪರಿಸರ ಖಾತೆ ಸಚಿವ ಬಾಬುಲ್ ಸುಪ್ರಿಯೋ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.
ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ‘ಮರಗಳಿಂದಲೇ ಉಸಿರು, ಮರಗಳಿಂದಲೇ ಆಮ್ಲಜನಕ, ಮರಗಳಿದ್ದರೆ ಪರಿಸರ ಉಳಿಯಲು ಸಾಧ್ಯ. 5 ವರ್ಷಗಳಲ್ಲಿ ಕೇಂದ್ರ ಸರ್ಕಾರ 1,09,75,844 ಗಿಡಗಳನ್ನು ಅಭಿವೃದ್ಧಿ ಹೆಸರಲ್ಲಿ ಕಡಿಯಲು ಅನುಮತಿ ನೀಡಿ, ‘ನಮ್ಮ ಭವಿಷ್ಯವನ್ನು ನಿರ್ನಾಮ’ ಮಾಡುತ್ತಿದೆ’ ಎಂದು ಟೀಕಿಸಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.