
ನವದೆಹಲಿ: ರಾಷ್ಟ್ರೀಕೃತ ಬ್ಯಾಂಕುಗಳ ವಿಲೀನ ಪ್ರಕ್ರಿಯೆಯಲ್ಲಿ ತೊಡಗಿರುವ ಕೇಂದ್ರ ಸರ್ಕಾರದ ಕಣ್ಣು ಇದೀಗ ಮತ್ತೊಮ್ಮೆ ಪ್ರಾದೇಶಿಕ ಗ್ರಾಮೀಣ ಬ್ಯಾಂಕು(ಆರ್ಆರ್ಬಿ)ಗಳ ಮೇಲೆ ಬಿದ್ದಿದೆ. ಹಾಲಿ 56 ರಷ್ಟಿರುವ ಆರ್ಆರ್ಬಿಗಳ ಸಂಖ್ಯೆಯನ್ನು 36ಕ್ಕೆ ಇಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯಪ್ರವೃತ್ತವಾಗಿದೆ.
ಅಂದರೆ 20 ಬ್ಯಾಂಕುಗಳು ವಿಲೀನಗೊಳ್ಳಲಿವೆ. ದೇಶದಲ್ಲಿರುವ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಗೆ ರಾಜ್ಯ ಸರ್ಕಾರಗಳೂ ಪ್ರಾಯೋಜಕ ರಾಗಿರುವ ಹಿನ್ನೆಲೆಯಲ್ಲಿ ಅವುಗಳ ಜತೆ ಕೇಂದ್ರ ಸರ್ಕಾರ ಸಮಾಲೋಚನೆ ಪ್ರಕ್ರಿಯೆಯನ್ನು ಆರಂಭಿಸಿದೆ.
ಆಯಾ ರಾಜ್ಯದೊಳಗೆ ಆರ್ಆರ್ಬಿಗಳ ವಿಲೀನ ಸಂಬಂಧ ಮಾರ್ಗಸೂಚಿಯನ್ನು ಬ್ಯಾಂಕುಗಳು ರೂಪಿಸುವ ಕಾರ್ಯದಲ್ಲಿ ಮಗ್ನವಾಗಿವೆ ಎಂದು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರ್ಆರ್ಬಿಗಳ ವಿಲೀನದಿಂದ ಆ ಬ್ಯಾಂಕುಗಳ ಉತ್ಪಾದಕತೆ ಹೆಚ್ಚುತ್ತದೆ.
ಹಣಕಾಸು ಆರೋಗ್ಯವೂ ಉತ್ತಮಗೊಳ್ಳುತ್ತದೆ. ಹಣಕಾಸು ಸೇರ್ಪಡೆ ಸುಧಾರಣೆಯಾಗುವುದರ ಜತೆಗೆ ಗ್ರಾಮೀಣ ಭಾಗಗಳಿಗೆ ಹೆಚ್ಚು ಸಾಲ ಲಭ್ಯವಾಗುತ್ತದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.