20 ವರ್ಷಕ್ಕಿಂತ ಹಳೆಯ ವಾಣಿಜ್ಯ ವಾಹನ ನೋಂದಣಿ ರದ್ದು

Published : Mar 17, 2018, 08:47 AM ISTUpdated : Apr 11, 2018, 12:45 PM IST
20 ವರ್ಷಕ್ಕಿಂತ ಹಳೆಯ ವಾಣಿಜ್ಯ ವಾಹನ ನೋಂದಣಿ ರದ್ದು

ಸಾರಾಂಶ

ಹಳೆಯ ವಾಹನಗಳು ಗಂಭೀರ ಪ್ರಮಾಣದಲ್ಲಿ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿರುವುದು ಮತ್ತು ಹೆಚ್ಚಿನ ಪ್ರಮಾಣದಲ್ಲಿ ಇಂಧನ ಬಳಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ವಾಣಿಜ್ಯ ಉದ್ದೇಶದ ವಾಹನಗಳಿಗೆ ಗರಿಷ್ಠ 20 ವರ್ಷಗಳ ವಯೋಮಿತಿ ನಿಗದಿ ಮಾಡಲು ನಿರ್ಧರಿಸಿದೆ.

ನವದೆಹಲಿ: ಹಳೆಯ ವಾಹನಗಳು ಗಂಭೀರ ಪ್ರಮಾಣದಲ್ಲಿ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿರುವುದು ಮತ್ತು ಹೆಚ್ಚಿನ ಪ್ರಮಾಣದಲ್ಲಿ ಇಂಧನ ಬಳಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ವಾಣಿಜ್ಯ ಉದ್ದೇಶದ ವಾಹನಗಳಿಗೆ ಗರಿಷ್ಠ 20 ವರ್ಷಗಳ ವಯೋಮಿತಿ ನಿಗದಿ ಮಾಡಲು ನಿರ್ಧರಿಸಿದೆ. ಈ ಮೂಲಕ ಇಂಥ ವಾಹನಗಳ ನೋಂದಣಿಯನ್ನು ರದ್ದುಪಡಿಸಲು ನಿರ್ಧರಿಸಿದೆ. 2020ಕ್ಕೆ ಇಂಥದ್ದೊಂದು ನಿಯಮವನ್ನು ಜಾರಿಗೆ ತರುವ ಉದ್ದೇಶ ಸರ್ಕಾರದ್ದು ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ ಪ್ರಧಾನಿ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಇಂಥದ್ದೊಂದು ನಿರ್ಣಯ ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ನೀತಿ ಆಯೋಗ, ಸಾರಿಗೆ, ಭಾರೀ ಕೈಗಾರಿಕೆ, ಹಣಕಾಸು ಮತ್ತು ಪರಿಸರ ಸಚಿವಾಲಯದ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಸರ್ಕಾರದ ಹೊಸ ನೀತಿಯ ಅನ್ವಯ 2000ಕ್ಕೆ ಮೊದಲು ನೋಂದಣಿಯಾಗಿ ರಸ್ತೆಗೆ ಇಳಿದಿದ್ದ ಎಲ್ಲಾ ವಾಹನಗಳು 2020ಕ್ಕೆ ರಸ್ತೆಯಿಂದ ಹೊರಗೆ ಹೋಗುವುದು ಅನಿವಾರ್ಯವಾಗಲಿದೆ. ಅಂದರೆ ಅಂದಾಜು 7 ಲಕ್ಷದಷ್ಟುಬಸ್‌, ಲಾರಿ, ಟ್ಯಾಕ್ಸಿ ಸೇರಿದಂತೆ ವಿವಿಧ ವಾಣಿಜ್ಯ ಉದ್ದೇಶದ ವಾಹನಗಳ ನೋಂದಣಿ ರದ್ದಾಗಲಿದೆ. ಇದೇ ವೇಳೆ ಹಳೆಯ ವಾಹನವನ್ನು ಗುಜರಿಗೆ ಹಾಕಿ, ಹೊಸ ವಾಹನ ಖರೀದಿ ಮಾಡಲು ಬಯಸುವವರಿಗೆ, ಹೊಸ ವಾಹನದ ಖರೀದಿ ವೇಳೆ ಶೇ.10ರಷ್ಟುರಿಯಾಯಿತಿ ನೀಡುವ ಪ್ರಸ್ತಾಪವೂ ಸರ್ಕಾರದ ಮುಂದಿದೆ.

ಆದರೆ, ಖಾಸಗಿ ವಾಹನಗಳಿಗೆ ಕಾಲಮಿತಿಯಿಲ್ಲ. ವಾಹನದ ಸಾಮರ್ಥ್ಯ ಪರೀಕ್ಷೆ ನಡೆಸಿದ್ದಲ್ಲಿ, ಖಾಸಗಿ ವಾಹನಗಳನ್ನು ರಸ್ತೆಗಿಳಿಸುವುದಕ್ಕೆ ಯಾವುದೇ ಅಡ್ಡಿಯಿಲ್ಲ. ಜೊತೆಗೆ ಹಳೆಯ ವಾಹನಗಳನ್ನು ಗುಜಿರಿಗೆ ಮಾರಾಟ ಮಾಡುವಾಗ ಅದಕ್ಕೆ ಜಿಎಸ್‌ಟಿ ಅನ್ವಯ ಮಾಡದಂತಹ ಪ್ರಸ್ತಾಪವೂ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!
ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ