ದಿಡ್ಡಳ್ಳಿ ನಿರಾಶ್ರಿತರಿಗೆ ವಸತಿ ಕಲ್ಪಿಸಲು ಸರ್ಕಾರ ಬದ್ಧ: ಸಿದ್ದರಾಮಯ್ಯ

By Suvarna Web DeskFirst Published Apr 11, 2017, 2:01 PM IST
Highlights

ಕೊಡಗು ಜಿಲ್ಲೆಯ ದಿಡ್ಡಳ್ಳಿ ನಿರಾಶ್ರಿತರಿಗೆ ಜಮೀನು, ನಿವೇಶನ ಕೊಡುವ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಅವರಿಗೆ ನೆರವಾಗಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು (ಏ.11): ಕೊಡಗು ಜಿಲ್ಲೆಯ ದಿಡ್ಡಳ್ಳಿ ನಿರಾಶ್ರಿತರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದೆ, ಅವರಿಗೆ ಮರು ವಸತಿ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೊಡಗು ಜಿಲ್ಲೆಯ ದಿಡ್ಡಳ್ಳಿ ನಿರಾಶ್ರಿತರಿಗೆ ಜಮೀನು, ನಿವೇಶನ ಕೊಡುವ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಅವರಿಗೆ ನೆರವಾಗಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿರುವವರಿಗೆ ಸರ್ಕಾರ ನೆರವು ಮತ್ತು ರಕ್ಷಣೆ ಒದಗಿಸಲಿದೆ ಎಂದು ಅವರು ಹೇಳಿದ್ದಾರೆ.

click me!