
ಬೆಂಗಳೂರು: ಅನುಭವ ಮಂಟಪದ ಮರು ನಿರ್ಮಾಣದ ಹಿನ್ನೆಲೆಯಲ್ಲಿ ಸರ್ಕಾರ ರಚನೆ ಮಾಡಿದ್ದ ಡಾ. ಗೋ.ರು. ಚನ್ನಬಸಪ್ಪ ನೇತೃತ್ವದ ತಜ್ಞರ ಸಲಹಾ ಸಮಿತಿಯು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ವರದಿಯನ್ನು ಸಲ್ಲಿಸಿದೆ.
ವರದಿ ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿಯವರು, ಅನುಭವ ಮಂಟಪದ ಮರು ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ತಜ್ಞರ ಸಮಿತಿ ರಚಿಸುವ ನಿರ್ಣಯವನ್ನು ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಕೈಗೊಳ್ಳಲಾಗಿತ್ತು.
ಈಗ ಸಮಿತಿ ನೀಡಿರುವ ವರದಿಯನ್ನು ಸರ್ಕಾರ ಪರಿಶೀಲಿಸಿ, ಮಂಡಳಿ ಸಭೆಯಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.
ಹನ್ನೆರಡನೇ ಶತಮಾನದಲ್ಲಿ ನಡೆದ ಸಮಾಜೋ-ಧಾರ್ಮಿಕ ದೋಲನದ ಸ್ಮರಣೆಯಾಗಿ ಬಸವ ಕಲ್ಯಾಣದಲ್ಲಿ ಉಳಿದುಕೊಂಡಿರುವ ಶರಣರ ಕೇಂದ್ರಗಳ ಜೀರ್ಣೋದ್ಧಾರ ಕಾರ್ಯ ನಡೆದಿದೆ. ಎಲ್ಲ ಆಂದೋಲನಗಳಿಗೆ ಕೇಂದ್ರಬಿಂದುವಾಗಿದ್ದ ಅನುಭವ ಮಟಂಪದ ಮರು ನಿರ್ಮಾಣಕ್ಕೂ ಇದೀಗ ಸರ್ಕಾರ ಮುಂದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.