ಇಂತಹ ಖಾತೆಗಳ ಮೇಲೆ ಇರಲಿದೆ ಕಣ್ಣು : ಹುಷಾರ್ ..!

Published : Sep 06, 2018, 11:14 AM ISTUpdated : Sep 09, 2018, 10:25 PM IST
ಇಂತಹ ಖಾತೆಗಳ ಮೇಲೆ ಇರಲಿದೆ ಕಣ್ಣು  : ಹುಷಾರ್ ..!

ಸಾರಾಂಶ

ಅಪನಗದೀಕರಣ ಪ್ರಕ್ರಿಯೆ ಅಧಿಕೃತವಾಗಿ ಪೂರ್ಣಗೊಳ್ಳುತ್ತಿದ್ದಂತೆಯೇ ಜನಧನ ಖಾತೆಗಳ ಮೇಲೆ ಮತ್ತೆ ಸರ್ಕಾರದ ಕಣ್ಣು ಬಿದ್ದಿದೆ. ಅತ್ಯಧಿಕ ಪ್ರಮಾಣದಲ್ಲಿ ಅಕ್ರಮ ಹಣ ಹರಿದು ಬಂದ ಶಂಕೆ ಹಿನ್ನೆಲೆಯಲ್ಲಿ ಸರ್ಕಾರ ಖಾತೆಗಳ ಮೇಲೆ ಕಣ್ಣಿಟ್ಟಿದೆ. 

ನವದೆಹಲಿ: ಅಪನಗದೀಕರಣದ ಸಂದರ್ಭದಲ್ಲಿ ಸಾಕಷ್ಟು ಅಕ್ರಮ ಹಣವು ಜನಧನ ಬ್ಯಾಂಕ್ ಖಾತೆಗಳಿಗೆ ಹರಿದು ಬಂದಿತ್ತು ಎಂಬ ಆರೋಪಗಳು ಕೇಳಿಬಂದಿದ್ದವು. ಇದೀಗ ಅಪನಗದೀಕರಣ ಪ್ರಕ್ರಿಯೆ ಅಧಿಕೃತವಾಗಿ ಪೂರ್ಣಗೊಳ್ಳುತ್ತಿದ್ದಂತೆಯೇ ಜನಧನ ಖಾತೆಗಳ ಮೇಲೆ ಮತ್ತೆ ಸರ್ಕಾರದ ಕಣ್ಣು ಬಿದ್ದಿದೆ. 

ನೋಟು ರದ್ದತಿ ವೇಳೆಯಲ್ಲಿನ ಸುಮಾರು 3.7 ಕೋಟಿ ಜನಧನ ಖಾತೆಗಳ ಪೈಕಿ ಶೇ. 60ರಷ್ಟು ಠೇವಣಿ ಅನುಮಾನಾಸ್ಪದವಾಗಿವೆ ಎಂದು ಸರ್ಕಾರ ಹೇಳಿದೆ. ಈ ಖಾತೆಗಳಲ್ಲಿನ ವಹಿವಾಟುಗಳನ್ನು ತನಿಖೆಗೆ ಒಳಪಡಿಸಲಾಗಿದೆ. ಮೇಲ್ನೋಟಕ್ಕೆ ಇವುಗಳನ್ನು ಅಕ್ರಮ ಎಂದು ಘಂಟಾಘೋಷವಾಗಿ ಹೇಳಲಾಗದು. ತನಿಖೆಗಾರರು ಠೇವಣಿಗಳನ್ನು ಪರಿಶೀಲಿಸುತ್ತಿದ್ದಾರೆ. 

ಒಂದು ವೇಳೆ ಠೇವಣಿ ಪ್ರಮಾಣಕ್ಕೂ, ಠೇವಣಿದಾರರು ಕೊಟ್ಟ ಮಾಹಿತಿಗಳಿಗೂ ಹೊಂದಾಣಿಕೆಯಾಗದಿದ್ದರೆ ಖಂಡಿತ ಕ್ರಮ  ಜರುಗಿಸಲಾಗುವುದು ಎಂದು ವಿತ್ತ ಸಚಿವಾಲಯದ ಕಾರ್ಯದರ್ಶಿ ಹಸ್ಮುಖ್ ಅಧಿಯಾ ಹೇಳಿದರು. ಆದರೆ ಠೇವಣಿಗಳು ಅಕ್ರಮವೋ-ಸಕ್ರಮವೋ ಎಂಬುದನ್ನು ಕೊನೆಗೆ ನ್ಯಾಯಾಲಯವೇ ತೀರ್ಮಾನಿಸಬೇಕು ಎಂದು ಅವರು ನುಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಗ್ರಾಹಕರಿಗೆ ಬಂಪರ್‌ ಪ್ಲ್ಯಾನ್‌ ಘೋಷಿಸಿದ Vi: 61 ರೂಪಾಯಿಯ ಮೊಬೈಲ್‌ ರಿಚಾರ್ಜ್‌ಗೆ 25 ಸಾವಿರದ ಬೆನಿಫಿಟ್‌!