ಕಾಶ್ಮೀರ ಬಿಕ್ಕಟ್ಟು ನಿರ್ವಹಿಸಲು ಕೇಂದ್ರ ವಿಫಲ

Published : Jan 07, 2018, 01:36 PM ISTUpdated : Apr 11, 2018, 01:07 PM IST
ಕಾಶ್ಮೀರ ಬಿಕ್ಕಟ್ಟು ನಿರ್ವಹಿಸಲು ಕೇಂದ್ರ ವಿಫಲ

ಸಾರಾಂಶ

ಸರಣಿ ಟ್ವೀಟ್’ಗಳ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಚಿದಂಬರಂ  ಕಾಶ್ಮೀರ ಸಮಸ್ಯೆಗೆ ರಾಜಕೀಯ ಪರಿಹಾರವನ್ನು ಹುಡುಕುವುದೇ ಬುದ್ದಿವಂತಿಕೆಯ ನಡೆ

ನವದೆಹಲಿ: ಕಾಶ್ಮೀರ ಕಣಿವೆಯಲ್ಲಿ ಶಾಂತಿ ಸ್ಥಾಪಿಸಲು ಕೇಂದ್ರ ಸರ್ಕಾರ ವಿಫಲವಾಗಿದೆಯೆಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಗೃಹ ಮಂತ್ರಿ ಪಿ.ಚಿದಂಬರಂ ಹೇಳಿದ್ದಾರೆ.

ಸರಣಿ ಟ್ವೀಟ್’ಗಳ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಚಿದಂಬರಂ, ಸರ್ಕಾರ ಕೈಗೊಂಡ ಕ್ರಮಗಳು ಹೇಗೆ ವಿಫಲವಾಗಿವೆ ಎಂದು ವಿವರಿಸಿದ್ದಾರೆ.

ಕಳೆದ ಡಿ.30-31 ರಾತ್ರಿ  ಸಿಆರ್’ಪಿಎಫ್ ತರಬೇತಿ ಕೇಂದ್ರದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ 5 ಮಂದಿ ಸಿಬ್ಬಂದಿ ಸಾವನ್ನಪಿರುವುದನ್ನು ಉಲ್ಲೇಖಿಸಿರುವ ಮಾಜಿ ಗೃಹಮಂತ್ರಿ, ಉಗ್ರರ ಸಂಖ್ಯೆ, ಭದ್ರತಾ ಸಿಬ್ಬಂದಿಗಳು ಹಾಗೂ ನಾಗರೀಕರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರ ಸಂಧಾನಕಾರರಾಗಿ ವಿಶೇಷ ಪ್ರತಿನಿಧಿಗಳನ್ನು ಕಳುಹಿಸಿದ್ದು ಯಾವುದೇ ಫಲಿತಾಂಶವನ್ನು ನೀಡಲಿಲ್ಲ.  ಅದೊಂದು  ಚುನಾವಣಾ ಪೂರ್ವ ಗಿಮಿಕ್ ಆಗಿದೆಯೆಂದು ಸಂಬಂಧಪಟ್ಟವರ ಅಭಿಪ್ರಾಯವಾಗಿತ್ತು, ಎಂದು ಚಿದಂಬರಂ ಹೇಳಿದ್ದಾರೆ.

 ಕಾಶ್ಮೀರ ಸಮಸ್ಯೆಗೆ ರಾಜಕೀಯ ಪರಿಹಾರವನ್ನು ಹುಡುಕುವುದೇ ಬುದ್ದಿವಂತಿಕೆಯ ನಡೆ; ಆ ನಿಟ್ಟಿನಲ್ಲಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಡಾ. ಮನಮೋಹನ್ ಸಿಂಗ್ ಅವರ ಪ್ರಯತ್ನಗಳು ಶ್ಲಾಘನೀಯವೆಂದು ಚಿದಂಬರಂ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾರು ಅಪಘಾತದಲ್ಲಿ ಮುಂಡಗೋಡು ಗ್ರಾಮ ಲೆಕ್ಕಾಧಿಕಾರಿ ಸ್ಥಳದಲ್ಲೇ ಸಾವು, ಮತ್ತಿಬರಿಗೆ ಗಾಯ
ಭಾರತೀಯರ ಕ್ರೇಜ್, ದುಬೈನ ಶಾರುಖ್ ಖಾನ್ ಆಫೀಸ್ ಟವರ್ ಬರೋಬ್ಬರಿ 5000 ಕೋಟಿ ರೂ ಗೆ ಮಾರಾಟ!