ರೈತ ಮುಖಂಡರ ಮನವೊಲಿಕೆ ವಿಫಲ

Published : Nov 22, 2016, 02:05 PM ISTUpdated : Apr 11, 2018, 12:54 PM IST
ರೈತ ಮುಖಂಡರ ಮನವೊಲಿಕೆ ವಿಫಲ

ಸಾರಾಂಶ

ನಾಲ್ಕು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ರೈತರು ಬಿಗಿಪಟ್ಟು ಹಿಡಿದಿದ್ದಾರೆ. ಮಹಾರಾಷ್ಟ್ರದಲ್ಲಿ ಕಬ್ಬು ಖರೀದಿಸುವ ಬೆಲೆಯಲ್ಲಿ ರಾಜ್ಯದಲ್ಲೂ ಖರೀದಿಸಬೇಕು. ಕಬ್ಬನ್ನು ಎಲ್ಲಿ ಬೇಕಾದರೂ ಹೋಗಿ ಮಾರಲು ಅವಕಾಶ ನೀಡಬೇಕು. ಕಾರ್ಖಾನೆಗಳೇ ಕಬ್ಬು ಖರೀದಿಸಿದರೂ 14 ದಿನದಲ್ಲಿ ಹಣ ಪಾವತಿಸಬೇಕು ಹಾಗೂ ಈ ಹಿಂದಿನ ಬಾಕಿ ಹಣಕ್ಕೆ ಬಡ್ಡಿ ಜತೆಗೆ ಪಾವತಿಸಬೇಕು ಅಂತ ರೈತರು ಪಟ್ಟು ಹಿಡಿದಿದ್ದಾರೆ.

ಬೆಳಗಾವಿ (ನ.22): ರೈತ ಮುಖಂಡರ ಮನವೊಲಿಸಲು ಸರ್ಕಾರ ನಡೆಸಿದ ಸಂಧಾನ ಸಭೆ ವಿಫಲವಾಗಿದೆ.

ಬೆಳಗಾವಿ ಡಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಹಕಾರ ಸಚಿವ ಮಹಾದೇವಪ್ರಸಾದ್​ ನೇತೃತ್ವ ವಹಿಸಿಕೊಂಡಿದ್ದರು. ಸ್ಪಷ್ಟ ನಿರ್ಧಾರ ಕೈಗೊಳ್ಳುವಲ್ಲಿ ವಿಫಲವಾಗಿರುವುದರಿಂದ ಗುರುವಾರ ಮತ್ತೊಮ್ಮೆ ಸಭೆ ನಡೆಸಲು ನಿರ್ಧಾರ ಮಾಡಲಾಗಿದೆ.

ನಾಲ್ಕು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ರೈತರು ಬಿಗಿಪಟ್ಟು ಹಿಡಿದಿದ್ದಾರೆ. ಮಹಾರಾಷ್ಟ್ರದಲ್ಲಿ ಕಬ್ಬು ಖರೀದಿಸುವ ಬೆಲೆಯಲ್ಲಿ ರಾಜ್ಯದಲ್ಲೂ ಖರೀದಿಸಬೇಕು. ಕಬ್ಬನ್ನು ಎಲ್ಲಿ ಬೇಕಾದರೂ ಹೋಗಿ ಮಾರಲು ಅವಕಾಶ ನೀಡಬೇಕು. ಕಾರ್ಖಾನೆಗಳೇ ಕಬ್ಬು ಖರೀದಿಸಿದರೂ 14 ದಿನದಲ್ಲಿ ಹಣ ಪಾವತಿಸಬೇಕು ಹಾಗೂ ಈ ಹಿಂದಿನ ಬಾಕಿ ಹಣಕ್ಕೆ ಬಡ್ಡಿ ಜತೆಗೆ ಪಾವತಿಸಬೇಕು ಅಂತ ರೈತರು ಪಟ್ಟು ಹಿಡಿದಿದ್ದಾರೆ.

ಅಲ್ಲದೇ ಸಹಕಾರಿ ಸಚಿವರು ರೈತ ಪರ ನಿರ್ಣಯ ಕೈಗೊಳ್ಳುತ್ತಿಲ್ಲ  ಸಚಿವರು, ಸಕ್ಕರೆ ಕಾರ್ಖಾನೆ ಮಾಲೀಕರ ಪರ ಮಾತನಾಡುತ್ತಿದ್ದಾರೆ ಅಂತ ಸರ್ಕಾರದ ವಿರುದ್ಧ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರ ಸ್ಥಳೀಯ ಚುನಾವಣೆ; ಬಿಜೆಪಿ ಮೈತ್ರಿಕೂಟಕ್ಕೆ ಭರ್ಜರಿ ಮುನ್ನಡೆ, ಮಕಾಡೆ ಮಲಗಿದ MVA
ವೈರಲ್ ಆಗ್ತಿದೆ ಕನ್ನಡದಲ್ಲಿ ಮುದ್ರಣಗೊಂಡಿರುವ 1948ರ ಮುಸ್ಲಿಂ ವಿವಾಹ ಆಮಂತ್ರಣ ಪತ್ರಿಕೆ