
ಬೆಂಗಳೂರು(ಜು.28): ನಿವೇಶನ, ಫ್ಲ್ಯಾಟ್ ಖರೀದಿಸುವವರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಿಯಲ್ ಎಸ್ಟೇಟ್ ನಿಯಂತ್ರಣ ಮತ್ತು ಅಭಿವೃದ್ಧಿ ಕಾಯ್ದೆ ರೇರಾ ಜಾರಿಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ನೀಡಿದೆ.
ರೇರಾ ಕಾಯ್ದೆ ಜಾರಿಯಿಂದ ರಿಯಲ್ ಎಸ್ಟೇಟ್ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ, ಲೂಟಿಗೆ ಕಡಿವಾಣ ಬೀಳಲಿದೆ. ಐಎಎಸ್ ಅಧಿಕಾರಿ ವಿನೋತ್ ಪ್ರಿಯಾ ಅವರನ್ನು ರೇರಾ ಕಾಯ್ದೆ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಸರ್ಕಾರ ನೇಮಕಗೊಳಿಸಲು ಆದೇಶ ಹೊರಡಿಸಿದೆ.
ಇನ್ನು ರೇರಾ ವೆಬ್ ಪೋರ್ಟಲ್ ಆರಂಭಿಸಲಾಗಿದ್ದು, ಈ ವೆಬ್ ಪೋರ್ಟಲ್'ನಲ್ಲಿ ರೇರಾ ಯೋಜನೆಗಳು,ನಿವೇಶನ ನೋಂದಣಿ, ಎಸ್ಟೇಟ್ ಏಜೆಂಟರ್ ಬಗ್ಗೆ ದೂರು ಸಲ್ಲಿಸಲು ಅವಕಾಶವಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.