ಬಿಬಿಎಂಪಿ ನೌಕರಿಗೆ ರಾಜ್ಯ ಸರ್ಕಾರ ಶಾಕ್: ನೌಕರರ ಪ್ರತಿಭಟನೆ ತಡೆಯಲು ಎಸ್ಮಾ ಜಾರಿ

Published : Sep 24, 2017, 10:50 AM ISTUpdated : Apr 11, 2018, 12:51 PM IST
ಬಿಬಿಎಂಪಿ ನೌಕರಿಗೆ ರಾಜ್ಯ ಸರ್ಕಾರ ಶಾಕ್: ನೌಕರರ ಪ್ರತಿಭಟನೆ ತಡೆಯಲು ಎಸ್ಮಾ ಜಾರಿ

ಸಾರಾಂಶ

ಬೆಂಗಳೂರಿನಲ್ಲಿ ಪೌರಕಾರ್ಮಿಕರು ಪದೇ ಪದೇ ಪ್ರತಿಭಟನೆ ಮಾಡುವುದನ್ನು ತಡೆಯಲು ರಾಜ್ಯ ಸರ್ಕಾರ ಎಸ್ಮಾ ಕಾಯ್ದೆ ಜಾರಿಗೊಳಿಸಿದೆ. ನಿನ್ನೆ ಮಲ್ಲೇಶ್ವರಂನ ಪಾಲಿಕೆ ಕಚೇರಿಯಲ್ಲಿ ಪೌರ ಕಾರ್ಮಿಕರು ಮತ್ತು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯ್ತು.

ಬೆಂಗಳೂರು(ಸೆ.24): ಬೆಂಗಳೂರಿನಲ್ಲಿ ಪೌರಕಾರ್ಮಿಕರು ಪದೇ ಪದೇ ಪ್ರತಿಭಟನೆ ಮಾಡುವುದನ್ನು ತಡೆಯಲು ರಾಜ್ಯ ಸರ್ಕಾರ ಎಸ್ಮಾ ಕಾಯ್ದೆ ಜಾರಿಗೊಳಿಸಿದೆ. ನಿನ್ನೆ ಮಲ್ಲೇಶ್ವರಂನ ಪಾಲಿಕೆ ಕಚೇರಿಯಲ್ಲಿ ಪೌರ ಕಾರ್ಮಿಕರು ಮತ್ತು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯ್ತು.

ಇನ್ನು ಬಿಬಿಎಂಪಿ ವ್ಯಾಪ್ತಿಯ ಪೌರ ಕಾರ್ಮಿಕರು ಕರ್ತವ್ಯಕ್ಕೆ ಹಾಜರಾಗುವುದನ್ನು ಕಡ್ಡಾಯಗೊಳಿಸುವ ಸಲುವಾಗಿ ರಾಜ್ಯ ಸರ್ಕಾರ ಎಸ್ಮಾ ಜಾರಿಗೊಳಿಸಿದೆ. ಸರಬರಾಜುದಾರರು ಮತ್ತು ಗುತ್ತಿಗೆದಾರರ ಅಧೀನದಲ್ಲಿ ತೊಡಗಿಸಿಕೊಂಡಿರುವ ಎಲ್ಲಾ ಪೌರ ಕಾರ್ಮಿಕರು, ಆಟೋ ಸಹಾಯಕರು, ಕಾಂಪ್ಯಾಕ್ಟರ್ ಲೋಡರ್‌ಗಳು, ಚಾಲಕರಿಗೆ ಎಸ್ಮಾ ಅನ್ವಯ ಆಗಲಿದೆ.

ಅಷ್ಟೇ ಅಲ್ಲದೆ ಇನ್ನು ಒಂದು ವರ್ಷದವರೆಗೆ ಈ ನೌಕರು ಮುಷ್ಕರ ಹೂಡುವುದನ್ನು ನಿಷೇಧಿಸಲಾಗಿದೆ. ನಗರದ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವುದು, ಸಾರ್ವಜನಿಕರ ಆರೋಗ್ಯದಲ್ಲಿ ಏರುಪೇರು ಉಂಟಾಗುವುದನ್ನು ತಡೆಗಟ್ಟುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಅಂತ ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕೀಯ ತೀಟೆಗೆ ಆರೋಪ, ಯಾವುದೇ ತನಿಖೆಗೆ ಸಿದ್ಧ: ಸಚಿವ ಕೃಷ್ಣ ಬೈರೇಗೌಡ
ಮುಂದಿನ 72 ಗಂಟೆಯಲ್ಲಿ ಭೂಮಿಯತ್ತ 10 ಕ್ಷುದ್ರ ಗ್ರಹ, ಡೇಂಜರ್ ಝೋನ್‌ನಲ್ಲಿದೆಯಾ ಜಗತ್ತು?