ಅಸ್ಸಾಂ ರೈಫಲ್ಸ್‌ಗೆ ವಾರಂಟ್‌ ಇಲ್ಲದೇ ಬಂಧಿಸುವ ಅಧಿಕಾರ..!

Published : Feb 22, 2019, 11:37 AM IST
ಅಸ್ಸಾಂ ರೈಫಲ್ಸ್‌ಗೆ ವಾರಂಟ್‌ ಇಲ್ಲದೇ ಬಂಧಿಸುವ ಅಧಿಕಾರ..!

ಸಾರಾಂಶ

ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಕಾರ, ‘ಅಪರಾಧ ದಂಡ ಸಂಹಿತೆಯಡಿ ಈಶಾನ್ಯ ರಾಜ್ಯಗಳಾದ ಅಸ್ಸಾಂ, ಅರುಣಾಚಲ ಪ್ರದೇಶ, ಮಣಿಪುರ, ನಾಗಾಲ್ಯಾಂಡ್‌ ಹಾಗೂ ಮಿಜೋರಾಂ ರಾಜ್ಯಗಳಲ್ಲಿ ಯಾವುದೇ ವಾರಂಟ್‌ ಇಲ್ಲದೆಯೇ ಯಾರನ್ನು ಬೇಕಾದರೂ ಬಂಧಿಸಬಹುದು. 

ನವದೆಹಲಿ(ಫೆ.22): ಆಘ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಮುಸ್ಲಿಮೇತರ ಅಕ್ರಮ ವಲಸಿಗರಿಗೆ ನಾಗರಿಕತ್ವ ನೀಡುವ ವಿವಾದಿತ ಪೌರತ್ವ ತಿದ್ದುಪಡಿ ಮಸೂದೆ ಬಗ್ಗೆ ಈಶಾನ್ಯ ರಾಜ್ಯಗಳಲ್ಲಿ ಭಾರೀ ಹಿಂಸಾಚಾರ ವ್ಯಕ್ತವಾದ ಬೆನ್ನಲ್ಲೇ, ಇದೀಗ ಈ ಭಾಗದಲ್ಲಿ ಯಾವುದೇ ವಾರೆಂಟ್‌ ಇಲ್ಲದೆ ಯಾರನ್ನು ಬೇಕಾದರೂ ಬಂಧಿಸಬಹುದಾದ ಹಕ್ಕನ್ನು ಕೇಂದ್ರ ಸರ್ಕಾರ ಅಸ್ಸಾಂ ರೈಫಲ್ಸ್‌ ಸಿಬ್ಬಂದಿಗಳಿಗೆ ನೀಡಿದೆ. 

ಈ ಬಗ್ಗೆ ಗುರುವಾರ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಕಾರ, ‘ಅಪರಾಧ ದಂಡ ಸಂಹಿತೆಯಡಿ ಈಶಾನ್ಯ ರಾಜ್ಯಗಳಾದ ಅಸ್ಸಾಂ, ಅರುಣಾಚಲ ಪ್ರದೇಶ, ಮಣಿಪುರ, ನಾಗಾಲ್ಯಾಂಡ್‌ ಹಾಗೂ ಮಿಜೋರಾಂ ರಾಜ್ಯಗಳಲ್ಲಿ ಯಾವುದೇ ವಾರಂಟ್‌ ಇಲ್ಲದೆಯೇ ಯಾರನ್ನು ಬೇಕಾದರೂ ಬಂಧಿಸಬಹುದು ಹಾಗೂ ಯಾವ ಸ್ಥಳವನ್ನು ಬೇಕಾದರೂ ಯಾವುದೇ ಮುನ್ಸೂಚನೆ ನೀಡದೇ, ಪರಿಶೀಲನೆ ನಡೆಸಬಹುದಾದ ಪರಮಾಧಿಕಾರವನ್ನು ಅಸ್ಸಾಂ ರೈಫಲ್ಸ್‌ನ ಸಿಬ್ಬಂದಿಗೆ ನೀಡಲಾಗಿದೆ’ ಎಂದು ತಿಳಿಸಿದೆ.

ಗೃಹಸಚಿವಾಲಯದ ಸುತ್ತೋಲೆಯ ಪ್ರಕಾರ, ಅಸ್ಸಾಂ ರೈಫಲ್ಸ್’ನ ಆಫೀಸರ್ ಶ್ರೇಣಿಯಿಂದ ಹಿಡಿದು ಕೆಳಹಂತದ ಸಿಬ್ಬಂದಿಯವರೆಗೆ ಈ ಪರಮೋಚ್ಛ ಅಧಿಕಾರವನ್ನು ನೀಡಲಾಗಿದೆ ಎಂದು ತಿಳಿಸಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಂಡವಾಳ ಆಕರ್ಷಣೆಗೆ ರಾಜ್ಯಗಳ ನಡುವೆ ಸ್ಪರ್ಧೆ ಹೆಚ್ಚಾಗಿದೆ: ಸಚಿವ ಎಂ.ಬಿ.ಪಾಟೀಲ್‌
ಬೀಚ್‌ಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ಬಗ್ಗೆ ಚರ್ಚೆ: ಡಿ.ಕೆ.ಶಿವಕುಮಾರ್‌