
ಬೆಂಗಳೂರು(ಅ.29): ಕೋಟಿಗಟ್ಟಲೆ ಅಕ್ರಮ ಆಸ್ತಿ ಗಳಿಸಿರುವ ಆರೋಪದ ಮೇಲೆ ಅಮಾನತಾಗಿರುವ ಸರಕಾರಿ ಅಧಿಕಾರಿ ಚಿಕ್ಕರಾಯಪ್ಪಗೆ ಮತ್ತೆ ರಾಜ್ಯ ಸರ್ಕಾರ ಹುದ್ದೆ ನೀಡಲು ಮುಂದಾಗಿದೆ. ಅಮಾನತಾಗಿರುವ ಚಿಕ್ಕರಾಮಪ್ಪಗೆ ಕೆಆರ್ ಎಸ್ ರಿಸರ್ಚ್ ಸೆಂಟರ್ ನಿರ್ದೇಶಕ ಹುದ್ದೆ ನೀಡಲು ಸರ್ಕಾರ ಚಿಂತನೆ ನಡೆಸಿದೆ.
ಈಗಾಗಲೇ ಸಿಎಂ ಸಿದ್ದರಾಮಯ್ಯ ನಾಲ್ಕು ಡಿಪಿಎಆರ್ ಸಂಸ್ಥೆಗಳಿಗೆ ಪತ್ರ ಬರೆದು ಇಬ್ಬರನ್ನು ಪುನರ್ ಸೇವೆಗೆ ಬಳಸಿಕೊಳ್ಳುವ ಬಗ್ಗೆ ಅಭಿಪ್ರಾಯ ಕೇಳಿದ್ದರು. ಆದರೆ ಯಾವುದೇ ಸಂಸ್ಥೆ ಉತ್ತರ ನೀಡಿರಲಿಲ್ಲ. ಹೀಗಾಗಿ ನಾವು ಯಾವುದೇ ಅಭಿಪ್ರಾಯ ಕೊಡಲು ಬರುವುದಿಲ್ಲ ನೀವು ಹೇಳಿದಂತೆ ಮಾಡುತ್ತೇವೆ ಎಂದು ಡಿಪಿಎಆರ್ ಸಿಎಂಗೆ ತನ್ನ ಅಭಿಪ್ರಾಯ ತಿಳಿಸಿದೆ.
ಹೀಗಾಗಿ ಸಿಎಂ ಚಿಕ್ಕರಾಯಪ್ಪಗೆ ಕೆಆರ್ ಎಸ್ ರಿಸರ್ಚ್ ಸೆಂಟರ್ ನಿರ್ದೇಶಕರಾಗಿ ನೇಮಕಗೊಳಿಸಲು ತೀರ್ಮಾನಿಸಿದ್ದಾರೆ ಎನ್ನಲಾಗ್ತಿದೆ. ಆದ್ರೆ ಜಯಚಂದ್ರ ವಿಚಾರದಲ್ಲಿ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎನ್ನಲಾಗ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.