ರಾಜ್ಯೋತ್ಸವ ಯಡವಟ್ಟು: ಮೈಸೂರಿನ ಒಬ್ಬರಿಗೆ 2ನೇ ಬಾರಿ ರಾಜ್ಯೋತ್ಸವ ಪ್ರಶಸ್ತಿ

Published : Oct 31, 2017, 04:13 PM ISTUpdated : Apr 11, 2018, 12:45 PM IST
ರಾಜ್ಯೋತ್ಸವ ಯಡವಟ್ಟು: ಮೈಸೂರಿನ ಒಬ್ಬರಿಗೆ 2ನೇ ಬಾರಿ ರಾಜ್ಯೋತ್ಸವ ಪ್ರಶಸ್ತಿ

ಸಾರಾಂಶ

ಈ ಮುನ್ನ 2005ರಲ್ಲಿ ಜಾನಪದ ಮತ್ತು ಯಕ್ಷಗಾನ ವಿಭಾಗದಲ್ಲಿ ರಾಜಶೇಖರ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿತ್ತು

ಮೈಸೂರು(ಅ.31): ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಪ್ರಮಾದವಾಗಿದ್ದು, ಕಲಾವಿದರೊಬ್ಬರಿಗೆ 2ನೇ ಬಾರಿ ಪ್ರಶಸ್ತಿ ಸಂದಿದೆ. ಮೈಸೂರಿನ ಜಾನಪದ ತಜ್ಞ ಡಾ. ಪಿ.ಕೆ. ರಾಜಶೇಖರ್ ಅವರನ್ನು ಎರಡನೇ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ರಾಜಶೇಖರ್ ಅವರನ್ನು ಈ ಬಾರಿ ಸಂಕೀರ್ಣ ವಿಭಾಗದಲ್ಲಿ ಪ್ರಶಸ್ತಿಗೆ ಪರಿಗಣಿಸಲಾಗಿದೆ. ಈ ಮುನ್ನ 2005ರಲ್ಲಿ ಜಾನಪದ ಮತ್ತು ಯಕ್ಷಗಾನ ವಿಭಾಗದಲ್ಲಿ ರಾಜಶೇಖರ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ ಪರಿಷ್ಕರಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ತಮಗೆ 2ನೇ ಬಾರಿ ಪ್ರಶಸ್ತಿ ಬಂದಿದ್ದನ್ನು ರಾಜಶೇಖರ್ ಸುವರ್ಣ ನ್ಯೂಸ್ ಸೋದರ ಪತ್ರಿಕೆ ‘ಕನ್ನಡಪ್ರಭ’ಕ್ಕೆ ಖಚಿತಪಡಿಸಿದ್ದಾರೆ. ಎರಡನೇ ಬಾರಿ ಪ್ರಶಸ್ತಿ ಪಡೆಯಬಾರದು ಎಂಬ ನಿಯಮವಿದ್ದರೆ, ಅದನ್ನು ಸ್ವೀಕರಿಸುವುದಿಲ್ಲ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಿತ್ತೂರು ಕರ್ನಾಟಕಕ್ಕೆ 5 ಸಾವಿರ ಕೋಟಿ ನೀಡಿ, ಇಲ್ಲವೇ ಪ್ರತ್ಯೇಕ ರಾಜ್ಯ ಕೊಡಿ: ಶಾಸಕ ರಾಜು ಕಾಗೆ
ಪುರುಷರಿಗೆ ಮಾತ್ರವಲ್ಲ ಮೊಬೈಲ್‌ ಸೇಫ್ಟಿಗೆ ಬಂದಿದೆ ಕಾಂಡೋಮ್‌, ಏನಿದು USB ಕಾಂಡೋಮ್‌?