
ಬೆಂಗಳೂರು (ಮಾ. 01): ಪರಪ್ಪನ ಅಗ್ರಹಾರ ಜೈಲು ಅಕ್ರಮ ವರದಿಯನ್ನು ಅಂಗೀಕಾರ ಮಾಡಲಾಗಿದೆ. ಭ್ರಷ್ಟಾಚಾರ ಬಯಲಿಗೆಳೆದ ಡಿ. ರೂಪಾ ವಿರುದ್ಧವೇ ತನಿಖೆಗೆ ಆದೇಶ ನೀಡಲಾಗಿದೆ.
ಅಂದಿನ ಡಿಜಿಪಿ ಸತ್ಯನಾರಾಯಣರಾವ್ ವಿರುದ್ಧ ರೂಪಾ ಆರೋಪ ಮಾಡಿದ್ದರು.
ಎಐಎಡಿಎಂಕೆ ನಾಯಕಿ ಶಶಿಕಲಾಗೆ ಜೈಲಿನಲ್ಲಿ ಐಷಾರಾಮಿ ವ್ಯವಸ್ಥೆ ನೀಡಲು ಲಂಚ 2 ಕೋಟಿ ರೂ ಲಂಚ ಪಡೆಯಲಾಗಿದೆ ಎಂದು ವರದಿ ಡಿ.ರೂಪಾ ವರದಿ ನೀಡಿದ್ದರು. ಆದರೆ ರೂಪಾ ವರದಿಯನ್ನು ಅಂದಿನ ಕಾರಾಗೃಹ ಡಿಜಿಪಿ ಸತ್ಯನಾರಾಯಣರಾವ್ ತಳ್ಳಿ ಹಾಕಿದ್ದರು. ಇಬ್ಬರ ನಡುವಿನ ಜಟಾಪಟಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸುವಂತೆ ಸರ್ಕಾರ ಆದೇಶ ನೀಡಿತ್ತು. ನಿವೃತ್ತ ಐಎಎಸ್ ಅಧಿಕಾರಿ ವಿಜಯ್ಕುಮಾರ್ ನೇತೃತ್ವದಲ್ಲಿ ತನಿಖೆ ನಡೆದಿತ್ತು. ಈ ತನಿಖಾ ವರದಿಯನ್ನು ಅಂಗೀಕಾರ ಮಾಡಲಾಗಿದೆ. ಡಿ. ರೂಪಾ, ನಿವೃತ್ತ ಡಿಜಿಪಿ ಸತ್ಯನಾರಾಯಣರಾವ್ ವಿರುದ್ಧ ಡಿಪಿಎಆರ್ ಮೂಲಕ ತನಿಖೆ ನಡೆಸಲು ಸರ್ಕಾರ ಆದೇಶಿಸಿದೆ. ಸೂಪರಿಟೆಂಡೆಂಟ್ ಕೃಷ್ಣ ಕುಮಾರ್, ಡೆಪ್ಯುಟಿ ಸೂಪರಿಟೆಂಡೆಂಟ್ ಅನಿತಾ ವಿರುದ್ಧವೂ ತನಿಖೆ ನಡೆಯಬೇಕೆಂದು ಆದೇಶಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.