
ಉಡುಪಿ (ಜ.09): ನಿನ್ನೆ ಬೈಂದೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶಕ್ಕೆ ಕೊಲ್ಲೂರು ದೇವಾಲಯದ ಊಟ ಸರಬರಾಜು ಮಾಡಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಕಲ್ಲಡ್ಕ ಶಾಲೆಗೆ ಕೊಡದ ಊಟ ಕಾಂಗ್ರೆಸ್ ಕಾರ್ಯಕರ್ತರಿಗೇಕೆ ಎಂಬ ಆಕ್ರೋಶದ ಮಾತು ಕೇಳಿ ಬಂದಿತ್ತು. ಆದರೆ ಈಗ ಕಾಂಗ್ರೆಸ್ ದೇವಸ್ಥಾನ ಆಡಳಿತ ಮಂಡಳಿಗೆ ಹಣ ಪಾವತಿಸಿ ವಿವಾದದಿಂದ ನುಣುಚಿಕೊಂಡಿದೆ. 1 ಲಕ್ಷ ರೂ.ಹಣವನ್ನು ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷ ಹರೀಶ್ ಉಪ್ಪುಂದ ಅವರು ಪಾವತಿಸಿದ್ದಾರೆ. ಊಟಕ್ಕೆ ತಗಲಿದ ವೆಚ್ಚವನ್ನು ದೇವಸ್ಥಾನದ ಅಕೌಂಟ್'ಗೆ ಪಾವತಿ ಮಾಡಿದ್ದಾರೆ. ಸರ್ಕಾರಿ ಕಾರ್ಯಕ್ರಮಕ್ಕೆ ಸರ್ಕಾರಿ ದೇವಸ್ಥಾನದ ಊಟ ಕೊಡುವ ಅವಕಾಶವಿದೆ.ಆದರೂ ಹಣ ಪಾವತಿಸಿದ್ದೇವೆ ಎಂದು ನುಣುಚಿಕೊಂಡಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್ ಸಾರ್ವಜನಿಕ ಆಕ್ರೋಶದಿಂದ ನುಣುಚಿಕೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.