ಅಂತ್ಯ ಸಂಸ್ಕಾರ ಸಹಾಯ ನಿಧಿ ಹೆಚ್ಚಳ

By Suvarna Web DeskFirst Published Jul 14, 2017, 11:12 PM IST
Highlights

ಅಲ್ಲದೇ, ವ್ಯಕ್ತಿ ಮರಣ ಹೊಂದಿದ ದಿನದಿಂದ ಒಂದು ತಿಂಗಳ ಬದಲಿಗೆ ಸಹಾಯ ಧನಕ್ಕಾಗಿ ಅರ್ಜಿ ಸಲ್ಲಿಸುವ ಕಾಲಾವಕಾಶವನ್ನು ಎರಡು ತಿಂಗಳಿಗೆ ವಿಸ್ತರಿಸಲಾಗಿದೆ.

ಬೆಂಗಳೂರು(ಜು.14): ಅಂತ್ಯ ಸಂಸ್ಕಾರ ಸಹಾಯ ನಿಧಿಯನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಿಪಿಎಲ್ ಕುಟುಂಬಗಳಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಅಂತ್ಯ ಸಂಸ್ಕಾರಕ್ಕೆ ನೀಡುತ್ತಿದ್ದ ಒಂದು ಸಾವಿರ ರೂಪಾಯಿ ಸಹಾಯ ಧನವನ್ನು ಐದು ಸಾವಿರ ರೂಪಾಯಿಗೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೇ, ವ್ಯಕ್ತಿ ಮರಣ ಹೊಂದಿದ ದಿನದಿಂದ ಒಂದು ತಿಂಗಳ ಬದಲಿಗೆ ಸಹಾಯ ಧನಕ್ಕಾಗಿ ಅರ್ಜಿ ಸಲ್ಲಿಸುವ ಕಾಲಾವಕಾಶವನ್ನು ಎರಡು ತಿಂಗಳಿಗೆ ವಿಸ್ತರಿಸಲಾಗಿದೆ.

click me!