ಸರ್ಕಾರಿ ಶಾಲೆಗಳ ಉಳಿಯುವಿಕೆಗೆ ಮಾಸ್ಟರ್ ಪ್ಲಾನ್; ಖಾಸಗಿ ಶಾಲೆಗಳಿಗೆ ಶಾಕ್!

Published : Nov 22, 2017, 08:07 AM ISTUpdated : Apr 11, 2018, 12:44 PM IST
ಸರ್ಕಾರಿ ಶಾಲೆಗಳ ಉಳಿಯುವಿಕೆಗೆ ಮಾಸ್ಟರ್ ಪ್ಲಾನ್; ಖಾಸಗಿ ಶಾಲೆಗಳಿಗೆ ಶಾಕ್!

ಸಾರಾಂಶ

ಸರ್ಕಾರಿ ಶಾಲೆಗಳು ದಿನದಿಂದ ದಿನಕ್ಕೆ ಮಕ್ಕಳಿಲ್ಲದೇ ಬಡವಾಗುತ್ತಿವೆ. ಒಂದೊಂದೇ ಶಾಲೆಗಳು ಮುಚ್ಚುತ್ತಿವೆ. ಹೀಗಿರುವಾಗ ಪರಿಷತ್ ಸದಸ್ಯರೊಬ್ಬರು ಇದೀಗ ಸರ್ಕಾರಿ ಶಾಲೆಗಳ ಉಳಿವಿಕೆಗೆ ಒಂದು ವಿಧೇಯಕ ಸಿದ್ಧಪಡಿಸಿದ್ದಾರೆ.

ಬೆಂಗಳೂರು (ನ.22): ಸರ್ಕಾರಿ ಶಾಲೆಗಳು ದಿನದಿಂದ ದಿನಕ್ಕೆ ಮಕ್ಕಳಿಲ್ಲದೇ ಬಡವಾಗುತ್ತಿವೆ. ಒಂದೊಂದೇ ಶಾಲೆಗಳು ಮುಚ್ಚುತ್ತಿವೆ. ಹೀಗಿರುವಾಗ ಪರಿಷತ್ ಸದಸ್ಯರೊಬ್ಬರು ಇದೀಗ ಸರ್ಕಾರಿ ಶಾಲೆಗಳ ಉಳಿವಿಕೆಗೆ ಒಂದು ವಿಧೇಯಕ ಸಿದ್ಧಪಡಿಸಿದ್ದಾರೆ.

ನಾಯಿಕೊಡೆಗಳಂತೆ ಹುಟ್ಟಿಕೊಂಡಿರುವ ಖಾಸಗಿ ಶಾಲೆಗಳ ಜೊತೆ ಸರ್ಕಾರಿ ಶಾಲೆಗಳಿಗೆ ಪೈಪೋಟಿ ನೀಡಲು ಆಗುತ್ತಿಲ್ಲ. ವಿದ್ಯಾರ್ಥಿಗಳ ಕೊರತೆಯಿಂದ ಸರ್ಕಾರಿ ಶಾಲೆಗಳಿಗೆ ಬೀಗ ಬೀಳುತ್ತಿವೆ. ಕೆಲವು ನಿರ್ವಹಣೆ ಕೊರತೆಯಿಂದ ಸೊರಗುತ್ತಿವೆ. ಇದಕ್ಕೆಲ್ಲಾ ಬ್ರೇಕ್ ಹಾಕಲು ಖಾಸಗಿ ವಿಧೇಯಕವೊಂದು ರೆಡಿಯಾಗಿದೆ. ಅದೇನಂದರೆ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳ ಮಕ್ಕಳು ಸರ್ಕಾರಿ ಶಾಲೆಗಳಲ್ಲೇ ಓದುವಂತೆ ನಿಯಮ ಜಾರಿಗೊಳಿಸಬೇಕೆಂಬ ವಿಧೇಯಕ ನಾಳೆ ಪರಿಷತ್​​ನಲ್ಲಿ ಮಂಡನೆಯಾಗಲಿದೆ.   ಕಾಂಗ್ರೆಸ್ ಸದಸ್ಯ ರಘು ಆಚಾರ್ ಈ ಖಾಸಗಿ ವಿಧೇಯಕ ಮಂಡಿಸಲಿದ್ದಾರೆ.

ಈ ವಿಧೇಯಕ ಅಂಗೀಕಾರವಾದರೆ ಸರ್ಕಾರಿ ಶಾಲೆಗಳಲ್ಲಿ ಹಾಜರಾತಿ ಹೆಚ್ಚಾಗಲಿದೆ. ಇದರಿಂದ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಗಳನ್ನು ಒದಗಿಸುವ ಜೊತೆಗೆ , ಶಾಲೆಗಳನ್ನು ಎಲ್ಲ ರೀತಿಯಲ್ಲಿ ಅಭಿವೃದ್ಧಿ ಪಡಿಸಲು ಸರ್ಕಾರ ಮುಂದಾಗಬೇಕಾಗುತ್ತದೆ. ಇದರಿಂದ ಖಾಸಗಿ ಶಾಲೆಗಳ ಆಟಾಟೋಪಕ್ಕೆ ಬ್ರೇಕ್ ಬೀಳಲಿದೆ.

ಈಗಾಗಲೇ ಈ ವಿಧೇಯಕಕ್ಕೆ ಬೆಂಬಲ ನೀಡುವಂತೆ ಪರಿಷತ್ ಸದಸ್ಯ ರಘು ಆಚಾರ್ ,ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಎಚ್ ಡಿ ಕುಮಾರಸ್ವಾಮಿ, ಈಶ್ವರಪ್ಪ ಎಲ್ಲರನ್ನೂ ಕೋರಿದ್ದಾರೆ. ಎಲ್ಲರಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ದೊರಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚುನಾವಣೆಗೂ ಮೊದಲೇ ಪ.ಬಂಗಾಳದಲ್ಲಿ ಬಿಜೆಪಿಗೆ ಶಾಕ್ ನೀಡಿದ ಮಮತಾ ಬ್ಯಾನರ್ಜಿ
ಮೂರುವರೆ ದಶಕಗಳಿಂದ ಇದ್ದ ಒಳ ಮೀಸಲಾತಿಗಾಗಿ ಹೋರಾಟಕ್ಕೆ ಜಯ ಸಿಕ್ಕಿದೆ: ಸಚಿವ ಮುನಿಯಪ್ಪ