
ಬೆಂಗಳೂರು : ಸಾಹಿತಿ ಚಂದ್ರಶೇಖರ್ ಪಾಟೀಲ್ ಅವರು ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಣಯ ಖುಷಿ ತಂದಿದೆ ಎಂದು ಹೇಳಿದ್ದಾರೆ.
ಇದು ಐತಿಹಾಸಿಕವಾದ ನಿರ್ಣಯವಾಗಿದೆ. ಲಿಂಗಾಯತ ಸಮುದಾಯ ಬಲಾಢ್ಯವಾದ ಸಮುದಾಯ. ಆರ್ಥಿಕ, ಸಾಂಸ್ಕೃತಿಕ, ರಾಜಕೀಯವಾಗಿ ಬಲಾಢ್ಯವಾದ ಸಮುದಾಯವಾಗಿದೆ. ಮನುವಾದದ ವಿರುದ್ಧ ಕ್ರಾಂತಿ ಮಾಡಿದ ಧರ್ಮಕ್ಕೆ ಇದೀಗ ನ್ಯಾಯ ಸಿಕ್ಕಿದೆ. ಇದಕ್ಕೆ ಕಾರಣರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಚಂಪಾ ಹೇಳಿದ್ದಾರೆ.
ನಾನೂ ಕೂಡ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಗುರುತಿಸಿಕೊಂಡವನು. ವೀರಶೈವ ಎಂದು ಕರೆದುಕೊಳ್ಳೋದು ಲಿಂಗಾಯತ ಧರ್ಮದ ಭಾಗ. ಲಿಂಗಾಯತ ಎನ್ನುವುದು ವೀರಶೈವ ಪಂಗಡ. ವೀರಶೈವ ಮಠಾಧೀಶರು ಈ ಸತ್ಯವನ್ನು ಒಪ್ಪಿಕೊಂಡು ಲಿಂಗಾಯತದೊಳಗೆ ಬರಬೇಕು.
ನಾನು ವೀರಶೈವ ಎಂಬ ಪಂಗಡಕ್ಕೆ ಸೇರಿದವರು. ನಾನೂ ಕೂಡ ಒಬ್ಬ ಜಂಗಮ. ಜಂಗಮರೆಲ್ಲರೂ ಕಾಯಕ ನಿಷ್ಠೆಯಿಂದ ಲಿಂಗಾಯತರಾದವರು ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.