ಅರ್ಚಕರ ಲೈಂಗಿಕ ಹಗರಣ : ಕರ್ನಾಟಕದ ಪ್ರಸಿದ್ಧ ದೇವಾಲಯ ಸರ್ಕಾರದ ವಶಕ್ಕೆ

Published : Jul 23, 2018, 09:10 AM IST
ಅರ್ಚಕರ ಲೈಂಗಿಕ ಹಗರಣ : ಕರ್ನಾಟಕದ ಪ್ರಸಿದ್ಧ ದೇವಾಲಯ ಸರ್ಕಾರದ ವಶಕ್ಕೆ

ಸಾರಾಂಶ

ಕರ್ನಾಟಕದ ಪ್ರಸಿದ್ಧ ದೇವಾಲಯವೊಂದರ ಅರ್ಚಕರ ಲೈಂಗಿಕ ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ದೇವಾಲಯದ ಆಡಳಿತವನ್ನು ಸರ್ಕಾರ ವಶಕ್ಕೆ ತೆಗೆದುಕೊಂಡಿದ್ದು ಈ ನಿಟ್ಟಿನಲ್ಲಿ ಭಕ್ತರು ಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ. 

ಬೆಂಗಳೂರು :  ಪ್ರಸಿದ್ಧ ಐತಿಹಾಸಿಕ ಸ್ಥಳವಾಗಿರುವ ಗಂಗಾವತಿ ತಾಲೂಕಿನ ಅಂಜನಾದ್ರಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ಪಡೆದಿರುವ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರ ಆದೇಶವನ್ನು ಪ್ರಶ್ನಿಸಿ ಭಕ್ತರು ಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ. ರಾಮಾಯಣ ಇತಿಹಾಸವುಳ್ಳ ಅಂಜನಾದ್ರಿ ಬೆಟ್ಟದಲ್ಲಿನ ಅಂಜನೇಯ ದೇವಸ್ಥಾನವನ್ನು ಈಗ ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದಿರುವುದು ಅಂಜನಾದ್ರಿ ಟ್ರಸ್ಟ್ ಮತ್ತು ಉಚ್ಚಾಟಿತ ವಿದ್ಯಾದಾಸ ಬಾಬಾ ಅವರಿಗೂ ಒಪ್ಪಿಗೆ ಇರಲಿಲ್ಲ. 

ಹಿಂದೂ ದೇವಾಲಯವನ್ನು ಸರ್ಕಾರದ ಸುರ್ಪದಿಗೆ ತೆಗೆದುಕೊಳ್ಳುವ ಹುನ್ನಾರ ಇದರಲ್ಲಿ ಅಡಗಿದೆ ಎಂದು ಹಲವಾರು ಭಕ್ತರು ಆರೋಪಿದ್ದಾರೆ. ಹೀಗಾಗಿ ಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. 

ವಿವಾದ ಏನು?: ಅಂಜನಾದ್ರಿ ಬೆಟ್ಟದಲ್ಲಿರುವ ಆಂಜನೇಯ ದೇವಸ್ಥಾನ ಅರ್ಚಕ ಮಹಾಂತ ವಿದ್ಯಾದಾಸ ಬಾಬಾ ಇಡೀ ದೇವಸ್ಥಾನದ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು.  ಆದರೆ, ಕಳೆದ  ತಿಂಗಳ ಹಿಂದೆ ವಿದ್ಯಾದಾಸ ಬಾಬಾ ಅವರ ಲೈಂಗಿಕ ಹಗರಣ ವೀಡಿಯೋ ವೈರಲ್ ಆಯಿತು. ಇದಾದ ಮೇಲೆ ಅವರನ್ನು ಇಲ್ಲಿಂದ ಜಾಗ ಖಾಲಿ ಮಾಡಿಸಲಾ ಯಿತು. ಅದಾದಮೇಲೆ ಬೇರೊಬ್ಬರು ನೋಡಿಕೊಳ್ಳುತ್ತಿದ್ದರು. ಕೆಲ ದಿನಗಳ ನಂತರ ವಿದ್ಯಾದಾಸ ಮತ್ತೆ ಆಗಮಿಸಿದರು. ಇದರಿಂದ ವಿವಾದ ಉಂಟಾಗಿ ಪರಿಸ್ಥಿತಿ ಕೈಮೀರಿ ಪದೇ ಪದೆ ಗಲಾಟೆಗಳು ನಡೆಯುತ್ತಿದ್ದವು.

ಇದನ್ನು ನಿಯಂತ್ರಣ ಮಾಡಿದ ಪೊಲೀಸ್ ಇಲಾಖೆ  ಜಿಲ್ಲಾಡಳಿತಕ್ಕೆ ವರದಿಯನ್ನು ನೀಡಿ, ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು ದೇವಸ್ಥಾನ ವನ್ನು ಮುಜರಾಯ ಇಲಾಖೆಯ ವ್ಯಾಪ್ತಿಗೆ ತೆಗೆದುಕೊಳ್ಳುವುದು ಉತ್ತಮ ಎಂದು ಹೇಳಿತ್ತು. ನಂತರ ಜು.20  ರಂದು ಜಿಲ್ಲಾಧಿಕಾರಿ ಎಂ.ಕನಗವಲ್ಲಿ ದೇವಸ್ಥಾವನ್ನು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಪಡೆದು ಆದೇಶ ಹೊರಡಿಸಿದ್ದರು. ಆಡಾಳಿತಾಧಿಕಾರಿಯಾಗಿ ಚಂದ್ರಮೌಳಿರನ್ನು ನಿಯೋಜಿಸಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನಲ್ಲಿ ಊಬರ್‌ ಕ್ರಾಂತಿಯ ಹೆಜ್ಜೆ, B2B ಲಾಜಿಸ್ಟಿಕ್ಸ್, ಮೆಟ್ರೋ ಟಿಕೆಟ್‌ ಕೂಡ ಲಭ್ಯ!
ದೆವ್ವಗಳ ಬಗ್ಗೆ ಪಿಎಚ್‌ಡಿ ಮಾಡಲಿದ್ದಾರೆ ಬಾಗೇಶ್ವರ ಬಾಬಾ ಧೀರೇಂದ್ರ ಶಾಸ್ತ್ರಿ! ಘೋಸ್ಟ್ ಬಗ್ಗೆ ತಿಳಿಯಲು ನಿಮಗೆ ಆಸಕ್ತಿ ಇದೆಯೇ?