ವಿಜಯನಗರ ಜಿಲ್ಲೆ ರಚನೆಗೆ ಸರ್ಕಾರ ತಾತ್ಕಾಲಿಕ ಬ್ರೇಕ್

By Web DeskFirst Published Sep 24, 2019, 11:26 AM IST
Highlights

ಬಳ್ಳಾರಿ ಜಿಲ್ಲೆಯನ್ನು ಇಬ್ಭಾಗಗೊಳಿಸಿ ನೂತನ ವಿಜಯನಗರ ಜಿಲ್ಲೆ ರೂಪಿಸುವ ಕೂಗಿಗೆ ವಿರೋಧ | ಉಪ ಚುನಾವಣೆ ಹಿನ್ನಲೆಯಲ್ಲಿ ಈ ವಿಚಾರವನ್ನು ತಾತ್ಕಾಲಿಕವಾಗಿ ಕೈ ಬಿಡಲಾಗಿದೆ. 

ಬೆಂಗಳೂರು (ಸೆ. 24): ಉಪಚುನಾವಣೆ ಘೋಷಣೆಯಾಗಿರುವ ಹಿನ್ನೆಲೆ ಯಲ್ಲಿ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರವನ್ನು ನೂತನ ಜಿಲ್ಲೆಯನ್ನಾಗಿ ಘೋಷಣೆ ಮಾಡುವ ತೀರ್ಮಾನವನ್ನು ರಾಜ್ಯ ಸರ್ಕಾರವು ತಾತ್ಕಾಲಿಕವಾಗಿ ಕೈಬಿಟ್ಟಿದೆ.

ಯಾವುದೇ ಕಾರಣಕ್ಕೂ ಜಿಲ್ಲೆ ಇಬ್ಭಾಗಕ್ಕೆ ಬಿಡೊಲ್ಲ: ಶ್ರೀರಾಮುಲು

ಅನರ್ಹಗೊಂಡಿರುವ ಶಾಸಕ ಆನಂದ್ ಸಿಂಗ್ ಅವರ ನೇತೃತ್ವದ ನಿಯೋಗ ವಿಜಯನಗರ ಜಿಲ್ಲೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಅವರಿಗೆ ಕಳೆದ ವಾರ ಮನವಿ ಮಾಡಿತ್ತು. ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಯಡಿಯೂರಪ್ಪ, ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಸಂಬಂಧಪಟ್ಟಂತಹ ಕಡತವನ್ನು ಮಂಡಿಸುವಂತೆ ಮುಖ್ಯಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದರು.

ಸ್ವಾರ್ಥಿಗಳಿಂದ ಸ್ವಾರ್ಥಕ್ಕಾಗಿ ವಿಜಯನಗರ ಜಿಲ್ಲೆ: ಈಗ ಅಪಸ್ವರ ಬಿಜೆಪಿಯಲ್ಲೇ!

ಆದರೆ, ಉಪಚುನಾವಣೆ ಘೋಷಣೆಯಾಗಿರುವ ಕಾರಣಕ್ಕಾಗಿ ವಿಜಯನಗರವನ್ನು ಹೊಸ ಜಿಲ್ಲೆಯನ್ನಾಗಿ ಘೋಷಣೆ ಮಾಡುವ ನಿರ್ಧಾರವನ್ನು ತಾತ್ಕಾಲಿಕವಾಗಿ ಕೈಬಿಟ್ಟಿದೆ. ಉಪಚುನಾವಣೆ ಬಳಿಕ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

click me!