
ನವದೆಹಲಿ (ಸೆ.09): ಪ್ರತಿಷ್ಠಿತ ಪದ್ಮ ಸಾಲಿನ ಪ್ರಶಸ್ತಿಗೆ ಸಾಧಕರ ಹೆಸರನ್ನು ಶಿಫಾರಸ್ಸುಗೊಳಿಸಲು ಸರ್ಕಾರ ಸಾರ್ವಜನಿಕರಿಗೆ ಅವಕಾಶ ನೀಡಿದೆ. ಶಿಫಾರಸ್ಸು ಪ್ರಕ್ರಿಯೆ, ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯನ್ನು ಪಾರದರ್ಶಕಗೊಳಿಸಲು ಸರ್ಕಾರ ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಿದೆ.
ನಾಮಾಂಕಿತ ಪ್ರಕ್ರಿಯೆಯನ್ನು ಆನ್ ಲೈನ್ ನಲ್ಲಿ ಮಾಡಬಹುದು, ನಾಮಾಂಕಿತದಾರರು ತಮ್ಮ ಆಧಾರ್ ಕಾರ್ಡ್ ವಿವರವನ್ನು ಸಲ್ಲಿಸಬೇಕು.
ಪದ್ಮ ಪ್ರಶಸ್ತಿಗೆ ಸಾಧಕರನ್ನು ಶಿಫಾರಸ್ಸು ಮಾಡಲು ಇದೇ ಮೊದಲ ಬಾರಿಗೆ ಸರ್ಕಾರ ಸಾರ್ವಜನಿಕರಿಗೆ ಅವಕಾಶ ಮಾಡಿಕೊಟ್ಟಿದೆ. ಪ್ರಶಸ್ತಿ ಆಯ್ಕೆಯನ್ನು ಪಾರದರ್ಶಕಗೊಳಿಸಲು ಮತ್ತು ನಿಜವಾದ ಸಾಧಕರಿಗೆ ಪ್ರಶಸ್ತಿ ಸಲ್ಲುವಂತೆ ಮಾಡಲು ಈ ರೀತಿ ಮಾಡಲಾಗಿದೆ ಎಂದು ಗೃಹ ಸಚಿವಾಲಯದ ವಕ್ತಾರ ತಿಳಿಸಿದ್ದಾರೆ.
ಸರ್ಕಾರ ಈಗಾಗಲೇ 1700 ಶಿಫಾರಸ್ಸು ಹೆಸರುಗಳನ್ನು ಸ್ವೀಕರಿಸಿದೆ. ಹೆಸರನ್ನು ಸಲ್ಲಿಸಲು ಇದೇ ತಿಂಗಳ 15 ಕೊನೆಯ ದಿನಾಂಕವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.