ತೇಜಸ್ ಬೆನ್ನಲ್ಲೇ 150 ರೈಲು, 50 ನಿಲ್ದಾಣ ಖಾಸಗೀಕರಣ

Published : Oct 11, 2019, 07:56 AM ISTUpdated : Oct 11, 2019, 08:53 AM IST
ತೇಜಸ್ ಬೆನ್ನಲ್ಲೇ 150 ರೈಲು, 50 ನಿಲ್ದಾಣ ಖಾಸಗೀಕರಣ

ಸಾರಾಂಶ

150 ರೈಲು, 50 ರೈಲು ನಿಲ್ದಾಣ ಖಾಸಗೀಕರಣ| ಖಾಸಗೀಕರಣದ ನೀಲನಕ್ಷೆಗಾಗಿ ಉನ್ನತಾಧಿಕಾರ ಕಾರ್ಯಪಡೆ ರಚನೆ

ನವದೆಹಲಿ[ಅ.11]: ಲಖನೌ- ದೆಹಲಿ ನಡುವಿನ ತೇಜಸ್‌ ಎಕ್ಸ್‌ಪ್ರೆಸ್‌ ರೈಲನ್ನು ಖಾಸಗೀಕರಣಗೊಳಿಸಿದ ಬೆನ್ನಲ್ಲೇ, ಕೇಂದ್ರ ಸರ್ಕಾರವು 150 ರೈಲುಗಳು ಹಾಗೂ 50 ರೈಲು ನಿಲ್ದಾಣಗಳನ್ನು ಖಾಸಗಿ ವಶಕ್ಕೆ ಒಪ್ಪಿಸಲು ಸಿದ್ಧತೆ ಆರಂಭಿಸಿದೆ. ಇದರ ನೀಲನಕ್ಷೆ ಸಿದ್ಧಪಡಿಸುವ ಉದ್ದೇಶದಿಂದ ರೈಲ್ವೆ ಮಂಡಳಿಯು ಕಾರ್ಯಪಡೆಯೊಂದನ್ನು ರಚಿಸಿದೆ.

ರೈಲ್ವೆ ಮಂಡಳಿ ರಚಿಸಿರುವ ಉನ್ನತಾಧಿಕಾರ ಸಮಿತಿಯಲ್ಲಿ ರೈಲ್ವೆ ಮಂಡಳಿ ಅಧ್ಯಕ್ಷ ಯಾದವ್‌, ನೀತಿ ಆಯೋಗದ ಸಿಇಒ ಅಮಿತಾಭ್‌ ಕಾಂತ್‌ ಅವರಲ್ಲದೆ, ಆರ್ಥಿಕ ಸಚಿವಾಲಯ, ವಸತಿ ಸಚಿವಾಲಯ ಹಾಗೂ ನಗರಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿಗಳೂ ಇರಲಿದ್ದಾರೆ.

ಖಾಸಗಿ ತೇಜಸ್‌ ರೈಲು ವಿಳಂಬವಾದ್ರೆ ಗಂಟೆಗೆ 100 ಪರಿಹಾರ ಸಿಗುತ್ತೆ!

ಕಾರ್ಯಪಡೆ ರಚನೆಗೂ ಮುನ್ನ ರೈಲ್ವೆ ಮಂಡಳಿಗೆ ಪತ್ರ ಬರೆದಿದ್ದ ಅಮಿತಾಭ್‌ ಕಾಂತ್‌ ಅವರು ‘400 ರೈಲು ನಿಲ್ದಾಣಗಳನ್ನು ವಿಶ್ವದರ್ಜೆಗೆ ಏರಿಸುವ ಗುರಿ ಹಾಕಿಕೊಳ್ಳಲಾಗಿತ್ತು. ಆದರೆ ಈವರೆಗೆ ಕೆಲವೇ ಕೆಲವು ನಿಲ್ದಾಣಗಳನ್ನು ಆ ಮಟ್ಟಕ್ಕೆ ಏರಿಸಲಾಗಿದೆ. ಹೀಗಾಗಿ ಇದನ್ನು ತ್ವರಿತಗೊಳಿಸುವ ಉದ್ದೇಶದಿಂದ 50 ನಿಲ್ದಾಣಗಳು ಹಾಗೂ 150 ರೈಲುಗಳ ಕಾರ್ಯಾಚರಣೆಯನ್ನು ಖಾಸಗಿ ಕಂಪನಿಗಳಿಗೆ ಒಪ್ಪಿಸಲು ನಿರ್ಧರಿಸಲಾಗಿದೆ. 6 ವಿಮಾನ ನಿಲ್ದಾಣಗಳನ್ನು ಕೂಡ ಇತ್ತೀಚೆಗೆ ಖಾಸಗಿಗೆ ವಹಿಸಲಾಗಿತ್ತು. ಅದರ ಅನುಭವದ ಆಧಾರದಲ್ಲಿ ಈಗ ಖಾಸಗೀಕರಣ ನೀತಿ ರೂಪಿಸಲಾಗುವುದು’ ಎಂದು ಹೇಳಿದ್ದರು.

ಕಳೆದ ಅಕ್ಟೋಬರ್‌ 4ರಂದು ಲಖನೌ-ದಿಲ್ಲಿ ತೇಜಸ್‌ ಎಕ್ಸ್‌ಪ್ರೆಸ್‌ ಆರಂಭವಾಗಿದ್ದು, ಇದನ್ನು ಖಾಸಗಿ ಕಂಪನಿಯು ನಿರ್ವಹಿಸುತ್ತಿದೆ. ಇದು ಇಂತಹ ಮೊದಲ ಖಾಸಗಿ ರೈಲಾಗಿದೆ.

ಇತ್ತೀಚೆಗಷ್ಟೇ ರೈಲ್ವೆ ಮಂಡಳಿಯು, ದೇಶದಲ್ಲಿನ ಎಲ್ಲಾ ರೈಲ್ವೆ ವಲಯಗಳಿಗೆ ಸುತ್ತೋಲೆಯೊಂದನ್ನು ರವಾನಿಸಿದ್ದು, ಅದರಲ್ಲಿ ನಿಮ್ಮ ವ್ಯಾಪ್ತಿಯಲ್ಲಿ ಯಾವ್ಯಾವ ರೈಲು ಮಾರ್ಗಗಳನ್ನು ಎಂಬುದರ ಬಗ್ಗೆ ಮಾಹಿತಿ ರವಾನಿಸಿ ಎಂದು ಸೂಚಿಸಿತ್ತು.

'ಬಿಹಾರಕ್ಕೆ ಮಿಡಿದ ಮೋದಿ 52 ಇಂಚಿನ ಎದೆ, ಕರ್ನಾಟಕ ವಿಚಾರದಲ್ಲಿ ಕಲ್ಲುಬಂಡೆ ಆಗಿದ್ದೇಕೆ?'

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
ಪೌರತ್ವ ಸಿಗುವ ಮುನ್ನವೇ ವೋಟರ್‌ ಲಿಸ್ಟ್‌ನಲ್ಲಿ ಹೆಸರು, ಸೋನಿಯಾ ಗಾಂಧಿಗೆ ನೋಟಿಸ್‌ ಕೊಟ್ಟ ದೆಹಲಿ ಕೋರ್ಟ್!