
ನವದೆಹಲಿ(ಡಿ.4): ಪರಿಸರ ಮಾಲಿನ್ಯ ತಡೆ ನಿಟ್ಟಿನಲ್ಲಿ, 2020ರ ಏ.1ಕ್ಕೂ ಮುನ್ನ ತಯಾರಾದ ಯಾವುದೇ ಬಿಎಸ್-4 ಇಂಜಿನ್ ವಾಹನಗಳ ನೋಂದಣಿಯನ್ನು 2020ರ ಜೂ.30 ನಂತರ ಮಾಡಿಕೊಳ್ಳದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಇದಕ್ಕೆ ಅಗತ್ಯವಾಗುವಂತೆ ಕೇಂದ್ರೀಯ ವಾಹನಗಳ ನಿಯಮಗಳ ತಿದ್ದುಪಡಿ ಮಸೂದೆ ಮಂಡಿಸಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ತಕರಾರು ಮತ್ತು ಸಲಹೆಗಳಿದ್ದರೆ ಡಿ.20ರೊಳಗೆ ತಿಳಿಸುವಂತೆ ಸಾರ್ವಜನಿಕರನ್ನು ಕೇಂದ್ರ ಹೆದ್ದಾರಿ ಸಚಿವಾಲಯ ಕೋರಿದೆ. 2020 ಏ.1ರಿಂದ ಬಿಎಸ್-4 ಇಂಜಿನ್’ಗಳನ್ನು ಬಿಎಸ್-6ಕ್ಕೆ ಬದಲಾವಣೆ ಮಾಡುವ ಬಗ್ಗೆ ಕಳೆದ ವರ್ಷ ಸರ್ಕಾರ ನಿರ್ಧರಿಸಿದೆ.
ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಅತ್ಯಂತ ಅಧಿಕ ಪ್ರಮಾಣದಲ್ಲಿ ಮಾಲಿನ್ಯ ಉಂಟಾಗುತ್ತಿದೆ. ಅಲ್ಲದೇ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಉಸಿರಾಡಲೂ ಕೂಡ ಕಷ್ಟ ಪಡಬೇಕಾದ ಸ್ಥಿತಿ ಗತಿ ಇದೆ. ಈ ಎಲ್ಲಾ ಸಮಸ್ಯೆಗಳನ್ನು ಕೊಂಚ ಮಟ್ಟಿಗಾದರೂ ತಗ್ಗಿಸಬೇಕಾದ ಹಿನ್ನೆಲೆಯಲ್ಲಿ ಸರ್ಕಾರವೂ ಈ ಕ್ರಮ ಕೈಗೊಳ್ಳಲು ತೀರ್ಮಾನಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.