ರಾಜ್ಯ ಸರ್ಕಾರದ ಹೊಸ ಯೋಜನೆ ಕೋಳಿ ಭಾಗ್ಯ!

Published : Sep 25, 2017, 05:23 PM ISTUpdated : Apr 11, 2018, 01:10 PM IST
ರಾಜ್ಯ ಸರ್ಕಾರದ ಹೊಸ ಯೋಜನೆ ಕೋಳಿ ಭಾಗ್ಯ!

ಸಾರಾಂಶ

ರಾಜ್ಯದ ಪ್ರತಿ ತಾಲೂಕಿನ ಐದು ಸಾವಿರ ಕುಟುಂಬಗಳಿಗೆ ಗಿರಿರಾಜ ಹಾಗೂ ನಾಟಿ ತಳಿಯ ಕೋಳಿಗಳನ್ನು ವಿತರಿಸುವ ಮೂಲಕ ಆ ಕುಟುಂಬಗಳನ್ನು ಆರ್ಥಿಕ ಸಬಲರನ್ನಾಗಿಸಲು ಹೊಸ ಯೋಜನೆ ರೂಪಿಸಲಾಗುತ್ತಿದೆ ಎಂದು ಪಶುಸಂಗೋಪನೆ ಹಾಗೂ ರೇಷ್ಮೆ ಇಲಾಖೆ ಸಚಿವ ಎ.ಮಂಜು ಹೇಳಿದ್ದಾರೆ.

ಧಾರವಾಡ: ರಾಜ್ಯದ ಪ್ರತಿ ತಾಲೂಕಿನ ಐದು ಸಾವಿರ ಕುಟುಂಬಗಳಿಗೆ ಗಿರಿರಾಜ ಹಾಗೂ ನಾಟಿ ತಳಿಯ ಕೋಳಿಗಳನ್ನು ವಿತರಿಸುವ ಮೂಲಕ ಆ ಕುಟುಂಬಗಳನ್ನು ಆರ್ಥಿಕ ಸಬಲರನ್ನಾಗಿಸಲು ಹೊಸ ಯೋಜನೆ ರೂಪಿಸಲಾಗುತ್ತಿದೆ ಎಂದು ಪಶುಸಂಗೋಪನೆ ಹಾಗೂ ರೇಷ್ಮೆ ಇಲಾಖೆ ಸಚಿವ ಎ.ಮಂಜು ಹೇಳಿದ್ದಾರೆ.

ರಾಯಾಪುರ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳದ ಪ್ರಾದೇಶಿಕ ಕೇಂದ್ರದಲ್ಲಿ ಭಾನುವಾರ ₹93 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಕುಕ್ಕುಟ ಸಾಕಣೆ ತರಬೇತಿ ಕೇಂದ್ರ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಬರಗಾಲ, ಕೃಷಿ ಕಾರ್ಮಿಕರ ಕೊರತೆ, ಮತ್ತಿತರೆ ಕಾರಣಗಳಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಕೋಳಿ, ಕುರಿ, ಜಾನುವಾರು ಸಾಕಣೆ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕಿದೆ. ಈಗಾಗಲೇ ಭೂ ಸಮೃದ್ಧಿ ಗ್ರಾಮ, ಪಶು ಭಾಗ್ಯದ ಮೂಲಕ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದು, ಅದೇ ರೀತಿ ತಾಲೂಕಿನ ಆಯ್ದ 5 ಸಾವಿರ ಕುಟುಂಬಗಳಿಗೆ ಕೋಳಿಗಳನ್ನು ನೀಡಲಾಗುವುದು.

ತಮ್ಮ ಹಿತ್ತಲುಗಳಲ್ಲೇ ಅವುಗಳನ್ನು ಸಾಕಿಕೊಳ್ಳಬೇಕು. ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಕೆಲವೆಡೆ ರೈತರು ಕಷ್ಟಪಟ್ಟು ಕೋಳಿ ಸಾಕಿದರೆ ಖಾಸಗಿ ಕಂಪನಿಯವರು ಅವರಿಂದ ಕಡಿಮೆ ಬೆಲೆಗೆ ಖರೀದಿಸಿ ಹೆಚ್ಚು ಬೆಲೆಗೆ ಮಾರುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಕೆಲ ನಿಯಮಗಳನ್ನು ರೂಪಿಸಲಾಗುವುದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕನ್ನಡ ಭಾಷೆ ಕಲಿಸದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ: ಸಚಿವ ಮಧು ಬಂಗಾರಪ್ಪ
ಹೆಣ್ಣು ಭ್ರೂಣ ಹತ್ಯೆ ತಡೆಗೆ ಪ್ರತಿ ಜಿಲ್ಲೆಗೆ ನೋಡಲ್‌ ಅಧಿಕಾರಿ ನೇಮಕ: ಸಚಿವ ದಿನೇಶ್‌ ಗುಂಡೂರಾವ್‌