ಆಯುರ್ವೇದ, ಯುನಾನಿ ವೈದ್ಯರಿಗೆ ಚಿಕಿತ್ಸೆ!

Published : Nov 24, 2016, 06:01 AM ISTUpdated : Apr 11, 2018, 12:57 PM IST
ಆಯುರ್ವೇದ, ಯುನಾನಿ ವೈದ್ಯರಿಗೆ ಚಿಕಿತ್ಸೆ!

ಸಾರಾಂಶ

ಆಯುರ್ವೇದ, ಪ್ರಕೃತಿ ಚಿಕಿತ್ಸೆ, ಸಿದ್ಧ, ಯುನಾನಿ ಮತ್ತು ಯೋಗ ವೈದ್ಯ ವೃತ್ತಿ ನಿರತರ ನೋಂದಣಿ ಮತ್ತು ವೈದ್ಯಕೀಯ ವೃತ್ತಿ ನಿರತರ ಸಂಕೀರ್ಣ ಉಪ ಬಂಧಗಳ ತಿದ್ದುಪಡಿ ವಿಧೇಯಕ ಸೇರಿ ಒಟ್ಟೂ5 ವಿಧೇಯ​ಕಗಳನ್ನು ಬುಧವಾರ ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದೆ. ಆರೋಗ್ಯ ಸಚಿವ ಕೆ.ರಮೇಶಕುಮಾರ್‌ ಈ ವಿಧೇಯಕ ಮಂಡಿಸಿದರು.

ಬೆಳಗಾವಿ (ನ.24): ಇನ್ನು ಮುಂದೆ ಆಯುರ್ವೇದ, ಯುನಾನಿ ವೈದ್ಯರು ಕಡ್ಡಾಯವಾಗಿ ನೋಂದಣಿ ಮಾಡಿ­​ಕೊಂಡು ಗುರುತಿನ ಚೀಟಿ ಪಡೆಯಬೇಕು. ಇಲ್ಲದಿದ್ದಲ್ಲಿ ದಂಡ, ಸೆರೆವಾಸಕ್ಕೂ ಸಿದ್ಧರಾಗಬೇಕು.

ಆಯುರ್ವೇದ, ಪ್ರಕೃತಿ ಚಿಕಿತ್ಸೆ, ಸಿದ್ಧ, ಯುನಾನಿ ಮತ್ತು ಯೋಗ ವೈದ್ಯ ವೃತ್ತಿ ನಿರತರ ನೋಂದಣಿ ಮತ್ತು ವೈದ್ಯಕೀಯ ವೃತ್ತಿ ನಿರತರ ಸಂಕೀರ್ಣ ಉಪ ಬಂಧಗಳ ತಿದ್ದುಪಡಿ ವಿಧೇಯಕ ಸೇರಿ ಒಟ್ಟೂ5 ವಿಧೇಯ​ಕಗಳನ್ನು ಬುಧವಾರ ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದೆ. ಆರೋಗ್ಯ ಸಚಿವ ಕೆ.ರಮೇಶಕುಮಾರ್‌ ಈ ವಿಧೇಯಕ ಮಂಡಿಸಿದರು.

ಆಯುರ್ವೇದ, ಯುನಾನಿ ಹಾಗೂ ಪ್ರಕೃತಿ ಚಿಕಿತ್ಸೆ, ಯೋಗ ವೈದ್ಯರು ನೋಂದಣಿ ಮಾಡಿಕೊಂಡು, ಗುರುತಿನ ಚೀಟಿ ಪಡೆಯ­ಬೇಕು. ಕಾನೂನು ಉಲ್ಲಂಘಿಸಿದಲ್ಲಿ ರೂ.50 ಸಾವಿರದಿಂದ ರೂ.5 ಲಕ್ಷದವರೆಗೆ ದಂಡ ವಿಧಿ­ಸಲು ಈ ವಿಧೇಯಕ ಅಧಿಕಾರ ನೀಡಲಿದೆ. ಜತೆಗೆ ಒಂದು ವರ್ಷ ಕಾರಾಗೃಹ ಶಿಕ್ಷೆಗೆ ಒಳಪಡಿಸಲೂ ಅವಕಾಶ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕನ್ನಡ ಭಾಷೆ ಕಲಿಸದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ: ಸಚಿವ ಮಧು ಬಂಗಾರಪ್ಪ
ಹೆಣ್ಣು ಭ್ರೂಣ ಹತ್ಯೆ ತಡೆಗೆ ಪ್ರತಿ ಜಿಲ್ಲೆಗೆ ನೋಡಲ್‌ ಅಧಿಕಾರಿ ನೇಮಕ: ಸಚಿವ ದಿನೇಶ್‌ ಗುಂಡೂರಾವ್‌