ಕಸದಿಂದ ವಿದ್ಯುತ್ ಉತ್ಪಾದನೆಗೆ ರಾಜ್ಯ ಸರಕಾರ ಚಿಂತನೆ

Published : Jun 09, 2017, 10:37 AM ISTUpdated : Apr 11, 2018, 12:43 PM IST
ಕಸದಿಂದ ವಿದ್ಯುತ್ ಉತ್ಪಾದನೆಗೆ ರಾಜ್ಯ ಸರಕಾರ ಚಿಂತನೆ

ಸಾರಾಂಶ

ಸರ್ಕಾರದ ವತಿಯಿಂದಲೇ ಗ್ಲೋಬಲ್‌ ಟೆಂಡರ್‌ ಆಹ್ವಾನಿಸಿ, ವೇಸ್ಟ್‌ ಟು ಎನರ್ಜಿ ಘಟಕಗಳನ್ನು ಅಭಿವೃದ್ಧಿ ಮಾಡುವ ಬಗ್ಗೆ ಪಾಲಿಕೆ ಚಿಂತಿಸಿದೆ. ಕಳೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರೂ ಸಹ ರಾಜ್ಯ ಸರ್ಕಾರದಿಂದ ಯೋಜನೆ ಜಾರಿ ಸಾಧ್ಯವೇ ಎಂಬುದನ್ನು ಪರಿಶೀಲಿಸಲು ತಿಳಿಸಿದ್ದರು.

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿರುವ 7 ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ‘ಕಸದಿಂದ ಕಾಂಪೋಸ್ಟ್‌ ಬದಲಿಗೆ ಕಸದಿಂದ ವಿದ್ಯುತ್‌ ಉತ್ಪಾದನೆ' ಘಟಕಗಳಾಗಿ ಮರು ನಿರ್ಮಾಣ ಮಾಡಲು ರಾಜ್ಯ ಸರ್ಕಾರದ ಮೊರೆ ಹೋಗಲು ಪಾಲಿಕೆ ಚಿಂತನೆ ನಡೆಸಿದೆ.

ಬಿಬಿಎಂಪಿಯು ಇತ್ತೀಚೆಗಷ್ಟೇ 7 ನೂತನ ಘಟಕಗಳನ್ನು ನಿರ್ಮಿಸಿದ್ದು, ಕಸದಿಂದ ಕಾಂಪೋಸ್ಟ್‌ ಉತ್ಪಾದಿಸುವ ಘಟಕಗಳಾಗಿರುವುದರಿಂದ ದುರ್ವಾಸನೆ ಸಮಸ್ಯೆ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ನಾಗರಿಕರು ಘಟಕಗಳನ್ನು ಮುಚ್ಚುವಂತೆ ಒತ್ತಾಯ ಮಾಡಿ ಪ್ರತಿಭಟನೆ ನಡೆಸುತ್ತಿ ದ್ದಾರೆ. ಇದಕ್ಕೆ ಮುಕ್ತಿ ಹಾಡಲು ಕಸದಿಂದ ವಿದ್ಯುತ್‌ (ವೇಸ್ಟ್‌ ಟು ಎನರ್ಜಿ) ಘಟಕಗಳನ್ನಾಗಿ ಪರಿವರ್ತಿಸಲು ಬಿಬಿಎಂಪಿ ಈಗಾಗಲೇ 3 ಬಾರಿ ಟೆಂಡರ್‌ ಕರೆದಿದ್ದರೂ ಯಾರೊಬ್ಬರೂ ಆಸಕ್ತಿ ತೋರಿಲ್ಲ. ಹೀಗಾಗಿ ಸರ್ಕಾರದ ವತಿಯಿಂದಲೇ ಗ್ಲೋಬಲ್‌ ಟೆಂಡರ್‌ ಆಹ್ವಾನಿಸಿ, ವೇಸ್ಟ್‌ ಟು ಎನರ್ಜಿ ಘಟಕಗಳನ್ನು ಅಭಿವೃದ್ಧಿ ಮಾಡುವ ಬಗ್ಗೆ ಪಾಲಿಕೆ ಚಿಂತಿಸಿದೆ. ಕಳೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರೂ ಸಹ ರಾಜ್ಯ ಸರ್ಕಾರದಿಂದ ಯೋಜನೆ ಜಾರಿ ಸಾಧ್ಯವೇ ಎಂಬುದನ್ನು ಪರಿಶೀಲಿಸಲು ತಿಳಿಸಿದ್ದರು.

ಕನ್ನಡಪ್ರಭ ವಾರ್ತೆ
epaper.kannadaprabha.in

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ಅಪ್ಪ- ಅಮ್ಮನ ವಿಚ್ಚೇಧನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!
ಟೊಯೋಟಾ ಹೈಡ್ರೋಜನ್ ಕಾರು ಮೂಲಕ ಸಂಸತ್‌ಗೆ ಬಂದ ಪ್ರಹ್ಲಾದ್ ಜೋಶಿ, ಇದರ ಲಾಭವೇನು?