
ಬೆಂಗಳೂರು : ‘ಮುಗ್ಧ ಅಲ್ಪಸಂಖ್ಯಾತರ’ ವಿರುದ್ಧ ಪ್ರಕರಣಗಳನ್ನು ವಾಪಸ್ ಪಡೆಯುವ ಸಂಬಂಧ ಹೊರಡಿಸಿದ್ದ ಸುತ್ತೋಲೆ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಅದನ್ನು ವಾಪಸ್ ಪಡೆದಿರುವ ರಾಜ್ಯ ಸರ್ಕಾರ, ‘ಅಲ್ಪಸಂಖ್ಯಾತರು’ ಎಂಬ ಶಬ್ದ ತೆಗೆದುಹಾಕಿ ಕೇವಲ ‘ಮುಗ್ಧರ’ ವಿರುದ್ಧದ ಪ್ರಕರಣ ವಾಪಸ್ ಪಡೆಯುವ ಕುರಿತಂತೆ ಪೊಲೀಸ್ ಇಲಾಖೆಯಿಂದ ಅಭಿಪ್ರಾಯ ಕೋರಿ ಸುತ್ತೋಲೆ ಹೊರಡಿಸಿದೆ.
ಇದರಿಂದಾಗಿ ಸಿದ್ದರಾಮಯ್ಯ ಸರ್ಕಾರ ಜನಾಕ್ರೋಶಕ್ಕೆ ಮಣಿದು ದೊಡ್ಡ ಯೂ-ಟರ್ನ್ ಹೊಡೆದಂತಾಗಿದೆ. ಶನಿವಾರ ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ರಾಮಲಿಂಗಾರೆಡ್ಡಿ, ‘ಕಳೆದ ಡಿಸೆಂಬರ್ 22ರಂದು ಹೊರಡಿಸಿದ್ದ ಸುತ್ತೋಲೆ ವಾಪಸ್ ಪಡೆಯಲಾಗಿದೆ. ಅದಕ್ಕೆ ಬದಲಾಗಿ ಹೊಸದಾಗಿ ಸುತ್ತೋಲೆ ಹೊರಡಿಸಲಾಗಿದೆ’ ಎಂದು ಸ್ಪಷ್ಟನೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.