ಗೋಕರ್ಣ ಮಠಕ್ಕೆ ಆಡಳಿತಾಧಿಕಾರಿ ನೇಮಕ: ಸರ್ಕಾರದ ದುಸ್ಸಾಹಸದ ವಿರುದ್ಧ ಸಿಡಿದ ಮಠಾಧೀಶರು

Published : Oct 06, 2016, 03:43 AM ISTUpdated : Apr 11, 2018, 01:07 PM IST
ಗೋಕರ್ಣ ಮಠಕ್ಕೆ ಆಡಳಿತಾಧಿಕಾರಿ ನೇಮಕ: ಸರ್ಕಾರದ ದುಸ್ಸಾಹಸದ ವಿರುದ್ಧ  ಸಿಡಿದ ಮಠಾಧೀಶರು

ಸಾರಾಂಶ

ಗೋಕರ್ಣದ ಶ್ರೀರಾಮಚಂದ್ರಾಪುರ ಮಠಕ್ಕೆ ರಾಜ್ಯ ಸರಕಾರ ಆಡಳಿತಾಧಿಕಾರಿ ನೇಮಿಸಿರುವುದನ್ನು ಕಲಬುರಗಿ ಜಿಲ್ಲೆಯ ಮಠಾಧೀಶರು ತೀವ್ರವಾಗಿ ಖಂಡಿಸುವ ಜೊತೆಗೆ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ಮಠಾಧೀಶರು ಸರ್ಕಾರಕ್ಕೆ ಎಚ್ಚರಿಕೆ ಕೂಡ ನೀಡಿದ್ದಾರೆ. ಆ ಕುರಿತ ಸಂಪೂರ್ಣ ವರದಿ ಇಲ್ಲಿದೆ ನೋಡಿ.

ರಾಜ್ಯ ಸರ್ಕಾರ ಇತ್ತೀಚಿಗೆ ಮಠಗಳತ್ತ ವಾರೆ ನೋಟ ಬೀರುತ್ತಿದೆ. ರಾಮಚಂದ್ರಾಪುರ ಮಠದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಬಂದ ಕೂಡಲೇ ಸರ್ಕಾರ ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ಗವರ್ನಮೆಂಟ್‌'ಗೆ ಬೇಕಂತೆ ಗೋಕರ್ಣದ ಗುಡಿ..!

ಸರ್ಕಾರ ಮಠಗಳ ಮೇಲೆ ಹಿಡಿತ ಸಾಧಿಸುವ ದುಸ್ಸಾಹಸಕ್ಕೆ ಮುಂದಾಗುತ್ತಿದೆ. ಇಂತಹ ಧೋರಣೆ ಮುಂದುವರೆಸಿದ್ರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಅಂತಾ ಮಠಾಧೀಶರು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ನೂರಾರು ವರ್ಷಗಳಿಂದ ಮಠಗಳು ಭಕ್ತರ ಸಹಕಾರದಿಂದ ಸಮಾಜ ಮುಖಿ ಕೆಲಸ ಮಾಡುತ್ತಿವೆ. ಸರಕಾರ ಮಾಡದೇ ಇರೋ ಕೆಲಸಗಳನ್ನೂ ಮಠಗಳು ಮಾಡಿವೆ. ಇಂತಹ ಮಠಗಳ ಪರಂಪರೆಗೆ ಧಕ್ಕೆ ತರುತ್ತಿರುವುದು ಸರಿಯಲ್ಲ. ಸಿಎಂ ಸಿದ್ದರಾಮಯ್ಯ ಮಸೀದಿ, ಚರ್ಚ್​ಗಳಲ್ಲಿ ಏನು ನಡೆಯುತ್ತಿದೆ ಅನ್ನೋದನ್ನು ಗಮನಿಸಲು ಆಡಳಿತಾಧಿಕಾರಿ ನೇಮಿಸಲಿ ಅಂತಾ ಮಠಾಧೀಶರು ಸವಾಲು ಹಾಕಿದ್ದಾರೆ.

ಇನ್ನೊಂದು ಕಡೆ ಗೋಕರ್ಣ ಮಠದಲ್ಲಿ ಇರೋ ಸ್ವಾಮೀಜಿಗಳೇ ಸರ್ಕಾರದ ಆಡಳಿತಾಧಿಕಾರಿ ನೇಮಕ ಮಾಡುವುದರಿಂದ ಮಠದ ಅಭಿವೃದ್ಧಿಯಾಗುತ್ತದೆ ಎನ್ನುತ್ತಿದ್ದಾರೆ. ಒಟ್ಟಿನಲ್ಲಿ ಸರ್ಕಾರ ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ  ಮಾಡಿರುವುದನ್ನು ಖಂಡಿಸಿ ಇತರೆ ಮಠಾಧೀಶರು ಸರ್ಕಾರದ ವಿರುದ್ಧ  ಈಗ ತಿರುಗಿ ಬಿದ್ದಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!