
ಬೆಂಗಳೂರು[ಜೂ.11]: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಕುರಿತಂತೆ ಶಂಕಿತ ಆರೋಪಿಗಳನ್ನು ಬಂಧಿಸಿರುವ ಎಸ್’ಐಟಿ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಗೌರಿ ಹತ್ಯೆ ನಡೆದು ಸುಮಾರು 10 ತಿಂಗಳುಗಳೇ ಕಳೆದರೂ ಇದುವರೆಗೂ ಅಪರಾಧಿ ಪತ್ತೆಯಾಗಿಲ್ಲ. ಈಗಾಗಲೇ ಎಸ್’ಐಟಿ ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜ, ಸುಜಿತ್ ಅಲಿಯಾಸ್ ಪ್ರವೀಣ್, ಮನೋಹರ್ ದುಂಡಪ್ಪ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ನ್ಯಾಯಲಯದ ವಿಚಾರಣೆ ಸಂದರ್ಭದಲ್ಲಿ ಆರೋಪಿ ಮನೋಹರ್ ದುಂಡಪ್ಪ ಎಸ್’ಐಟಿ ಅಧಿಕಾರಿಗಳು ತಮಗೆ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ವಿಚಾರಣೆಯಲ್ಲಿ ನಡೆದಿದ್ದೇನು ಎನ್ನುವುದನ್ನು ವಿವರಿಸುತ್ತಾರೆ ಸುವರ್ಣನ್ಯೂಸ್ ಪ್ರತಿನಿಧಿ ರಮೇಶ್ ಹೊಸದುರ್ಗ ಅವರ ಮಾತಿನಲ್ಲೇ ಕೇಳಿ..
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.