
ಬೆಂಗಳೂರು(ನ.05): ಬೆಂಗಳೂರಿನಲ್ಲಿ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ನಡೆದು ಇಂದಿಗೆ 2 ತಿಂಗಳಾಗಿದ್ದು, ಎಸ್'ಐಟಿ ಗೌರಿ ಲಂಕೇಶ್ ಹಂತಕರ ಸ್ಪಷ್ಟ ಸುಳಿವು ದೊರಕಿದೆ.
ಕಳೆದ ಎರಡು ತಿಂಗಳಿಂದ ಹಂತಕರ ಬೆನ್ನು ಬಿದ್ದಿರುವ ಎಸ್'ಐಟಿ ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ. ಸ್ಪಷ್ಟ ಸುಳಿವಿನ ಮೇಲೆ ಹಂತಕರಿಗಾಗಿ ಹುಡುಕಾಟ ನಡೆಸುತ್ತಿರುವ ಎಸ್'ಐಟಿ ಶೀಘ್ರದಲ್ಲೇ ಹಂತಕರನ್ನ ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದೆ.
ರಾಜ್ಯದ ವಿವಿಧ ಜಿಲ್ಲೆಗಳು ಸೇರಿ ಮಹಾರಾಷ್ಟ್ರದ ಪುಣೆ, ಕೊಲ್ಹಾಪುರದಲ್ಲಿ ಹಂತಕರಿಗಾಗಿ ಎಸ್'ಐಟಿ ಶೋಧ ನಡೆಸುತ್ತಿದೆ. ರೌಡಿ ಚಟುವಟಿಕೆ ಹಿನ್ನಲೆಯುಳ್ಳವರ ವಿಚಾರಣೆ ನಡೆಸಿದೆ. ಗೌರಿ ಕುಟುಂಬದವರು, ಸ್ನೇಹಿತರು, ಕಚೇರಿ ಸಿಬ್ಬಂದಿ, ಹೇಳಿಕೆ ಪಡೆದಿರುವ ಶೀಘ್ರದಲ್ಲಿ ಹಂತಕರನ್ನು ಬಂಧಿಸಲಾಗುವುದು ಎಂದು ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.