
ಬೆಂಗಳೂರು(ಅ.17): ಜಯ ಕರ್ನಾಟಕ ಸಂಘಟನೆಯವರು ಈ ಹಿಂದೆ ಮೂರ್ನಾಲ್ಕು ಬಾರಿ ನನ್ನನ್ನು ಸಂಪರ್ಕಿಸಿ ಉದ್ಘಾಟ ನೆಗೆ ಮನವಿ ಮಾಡಿದ್ದರು. ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರಿಂದ ಬಿಡುವಿರಲಿಲ್ಲ. ಆದರೂ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಸ್ನೇಹಕ್ಕಾಗಿ ಈ ಕಾರ್ಯ ಕ್ರಮದಲ್ಲಿ ಭಾಗವಹಿಸಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಜಯ ಕರ್ನಾಟಕ ಸಂಘಟನೆ ಸೋಮವಾರ ಆಯೋಜಿಸಿದ್ದ ಸಮಾರಂಭದಲ್ಲಿ ಸಂಘಟನೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಘಟಕ ಉದ್ಘಾಟಿಸಿದ ಅವರು, ಮುತ್ತಪ್ಪ ರೈ ಅವರ ಹಿನ್ನೆಲೆ ಏನೇ ಇರಬಹುದು. ನನಗೆ ಅದರ ಅಗತ್ಯವಿಲ್ಲ. ನನಗೆ ಅವರ ಸ್ನೇಹ ಬೇಕು. ನಾನು ನೋಡಲು ಸಾಫ್ಟ್ ಆಗಿ ಕಾಣುತ್ತೇನೆ ಅಷ್ಟೇ. ಯಾರು ಏನೇ ಟೀಕೆ ಮಾಡಿದರೂ ನಾನು ಹೆದರುವುದಿಲ್ಲ ಎಂದು ಪರಮೇಶ್ವರ್ ಏರು ದನಿಯಲ್ಲಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.