
ಶಿವಮೊಗ್ಗ (ಜ.23): ಮದುವೆಯಾಗುವುದಾಗಿ ನಂಬಿಸಿ ಗ್ರಾಮ ಪಂಚಾಯ್ತಿ ಸದಸ್ಯನೊಬ್ಬ ಯುವತಿಗೆ ಮೋಸ ಮಾಡಿರುವ ಘಟನೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಸಮೀಪದ ಮಳವಲ್ಲಿಯಲ್ಲಿ ನಡೆದಿದೆ.
ಪ್ರೀತಿ ಹೆಸರಲ್ಲಿ ನಾಟಕವಾಡಿ ಯುವತಿ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದ ಹೆದ್ದಾರಿಪುರ ಗ್ರಾ.ಪಂ. ಸದಸ್ಯ ಚಂದ್ರಶೇಖರ್, ಆಕೆ ಗರ್ಭಿಣಿ ಅಂತ ಗೊತ್ತಾದಾಗ ಮತ್ತೊಂದು ನಾಟಕವಾಡಿದ್ದಾನೆ. ಕೊನೆಗೆ ಅಕ್ರಮ ಸಂಬಂಧಕ್ಕೆ ಹುಟ್ಟಿದ್ದ ಆ ಮಗುವನ್ನೂ ಬೇರೆಯವರಿಗೆ ದತ್ತು ಕೊಟ್ಟು ಇದೀಗ ಮದುವೆಯಾಗಲು ಒಲ್ಲೆ ಎಂದಿದ್ದಾನೆ. ಹೆದ್ದಾರಿಪುರ ಗ್ರಾ.ಪಂ. ಸದಸ್ಯ ಚಂದ್ರಶೇಖರ್'ನಿಂದ ವಂಚನೆಗೊಳಗಾದ ಯುವತಿ, ನ್ಯಾಯಕ್ಕಾಗಿ ಮಹಿಳಾ ಠಾಣೆ ಮೆಟ್ಟಿಲೇರಿದ್ದಾಳೆ.
ಬಡ ಕುಟುಂಬದ ಯುವತಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಳು. ಈ ವೇಳೆ ಪರಿಚಯವಾಗಿದ್ದ ಚಂದ್ರಶೇಖರ್ ಆಕೆಯನ್ನು ಪ್ರೀತಿ ಮಾಡ್ತೀನಿ, ಮದುವೆ ಆಗ್ತೀನಿ ಅಂತ ನಂಬಿಸಿದ್ದಾನೆ. ಆಕೆ ಗರ್ಭಿಣಿ ಮಾಡಿದ್ದಲ್ಲದೆ ಆ ಮಗುವನ್ನು ಬೇರೆಯವರಿಗೆ ದತ್ತು ನೀಡಿ, ತನಗೂ ಆ ಯುವತಿಗೂ ಯಾವುದೇ ಸಂಬಂಧ ಇಲ್ಲ ಅಂತ ಕೈತೊಳೆದುಕೊಂಡಿದ್ದಾನೆ. ಸಾಲದೂ ಅಂತ ಬೇರೆ ಯುವತಿಯ ಜೊತೆಗೆ ನಿಶ್ಚಿತಾರ್ಥವನ್ನೂ ಮಾಡಿಕೊಂಡಿದ್ದಾನೆ. ವಿಷಯ ತಿಳಿದ ಯುವತಿ ನ್ಯಾಯಕ್ಕಾಗಿ ಕಣ್ಣೀರಿಡುತ್ತಿದ್ದಾಳೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.