ಲಂಚ ಆರೋಪ: ಉಪ್ಪು ಮುಟ್ಟಿ ಪ್ರಮಾಣ ಮಾಡಿದ ಬಾರ್ ಮಾಲಿಕ, ಗ್ರಾ. ಪಂ ಅಧ್ಯಕ್ಷ

Jul 29, 2018, 10:44 AM IST

ಲಂಚದ ಆರೋಪಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಬಾರ್ ಮಾಲಿಕ ಉಪ್ಪು ಮುಟ್ಟಿ ಪ್ರಮಾಣ ಮಾಡಿರುವ ಘಟನೆ ಚಾಮರಾಜ ನಗರದಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ಗ್ರಾಮ ಸಭೆ ನಡೆಯುತ್ತಿತ್ತು. ಈ ವೇಳೆ ವೇದಿಕೆಗೆ ಬಂದ ಬಾರ್ ಮಾಲಿಕ ಗೋವಿಂದ ಸ್ವಾಮಿ ಗ್ರಾಮ ಪಂಚಾಯತ್ ಅಧ್ಯಕ್ಷನ ಮೇಲೆ ಲಂಚದ ಆರೋಪ ಮಾಡಿದರು.