
ನವದೆಹಲಿ (ಮೇ.15): ಕುಲಭೂಷಣ್ ಜಾಧವ್ ಗಲ್ಲುಶಿಕ್ಷೆ ಪ್ರಕರಣದ ವಿಚಾರಣೆ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ವಿಚಾರಣೆ ಮುಕ್ತಾಯಗೊಂಡಿದೆ. ಭಾರತದ ಪರ ಹರೀಶ್ ಸಾಲ್ವೆ ವಾದ ಮಂಡಿಸಿದ್ದಾರೆ.
11 ನ್ಯಾಯಾಧೀಶರನ್ನು ಒಳಗೊಂಡ ನ್ಯಾಯಪೀಠವು ಭಾರತದ ಅರ್ಜಿ ವಿಚಾರಣೆ ನಡೆಸಿದೆ. ಪಾಕಿಸ್ತಾನವು ಮಾನವ ಹಕ್ಕನ್ನು ಉಲ್ಲಂಘನೆ ಮಾಡಿದೆ. ಭಾರತೀಯ ಕಾಲಮಾನ 6.30 ಇನ್ನೊಂದು ವಿಚಾರಣೆ ಪ್ರಾರಂಭವಾಗಲಿದೆ.
ಭಾರತದ ವಾದವೇನು?
ಕುಲಭೂಷಣ್ ಜಾಧವ್ ಗಲ್ಲುಶಿಕ್ಷೆಯನ್ನು ರದ್ದುಗೊಳಿಸಬೇಕು. ಪಾಕಿಸ್ತಾನವು ವಿಯೆನ್ನಾ ಶಿಷ್ಚಾಚಾರಗಳನ್ನು ಉಲ್ಲಂಘಿಸಿದೆ. ಪಾಕಿಸ್ತಾನ ಸಾಕ್ಷಿಗಳನ್ನು ಹಂಚಿಕೊಳ್ಳಲು ನಿರಾಕರಿಸಿದೆ. ಜಾಧವ್ ರನ್ನು ಭಾರತದ ರಾಯಭಾರಿಗಳು ಭೇಟಿ ಮಾಡಲು 16 ಬಾರಿ ಕೇಳಿಕೊಂಡರೂ ಪಾಕ್ ನಿರಾಕರಿಸಿದೆ.
ಈ ಪ್ರಕರಣವನ್ನು ಅತೀ ದೊಡ್ಡ ರಾಜತಾಂತ್ರಿಕ ಸಮಸ್ಯೆ ಎನ್ನಲಾಗಿದೆ. 6.30 ಕ್ಕೆ ಪಾಕ್ ವಿಚಾರಣೆ ಪ್ರಾರಂಭವಾಗಲಿದ್ದು ತೀರ್ಪು ಕುತೂಹಲ ಕೆರಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.