
ನವದೆಹಲಿ (ಸೆ.12): ಕೇಂದ್ರ ಸಚಿವ ಸಂಪುಟವು ಸರಕು ಮತ್ತು ಸೇವಾ ತೆರಿಗೆ ಮಂಡಳಿ ರಚನೆಗೆ ಅನುಮೋದನೆ ನೀಡಿದೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸರಕು ಮತ್ತು ಸೇವಾ ತೆರಿಗೆಗೆ ಜಾರಿಗೆ ಒಪ್ಪಿಗೆ ನೀಡಿದ ನಂತರ ಸಂಪುಟವು ಸರಕು ಮತ್ತು ಸೇವಾ ತೆರಿಗೆ ಮಂಡಳಿ ರಚನೆಗೆ ಸಹಮತ ವ್ಯಕ್ತಪಡಿಸಿದೆ.
ಹೊಸ ತೆರಿಗೆ ನೀತಿ ಹೇಗೆ ಕಾರ್ಯ ನಿರ್ವಹಿಸುತ್ತದೆ, ಜಿಎಸ್’ಟಿ ತೆರಿಗೆ ದರ ಸೇರಿದಂತೆ ಬೇರೆ ಬೇರೆ ವಿಚಾರಗಳನ್ನು ನಿರ್ಧರಿಸುವ ಜವಾಬ್ದಾರಿ ಸರಕು ಮತ್ತು ಸೇವಾ ಮಂಡಳಿ (ಜಿಎಸ್ ಟಿ) ಮೇಲಿದೆ. ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಈ ಮಂಡಳಿಯ ನೇತೃತ್ವ ವಹಿಸಲಿದ್ದಾರೆ.
ಏಪ್ರಿಲ್ 1, 2017 ರಿಂದ ಜಿಎಸ್’ಟಿ ಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.