ಕನ್ನಡ ಸಿನಿಮಾಕ್ಕೆ ಜಿಎಸ್'ಟಿ ಇಲ್ಲ

Published : Jun 20, 2017, 09:34 AM ISTUpdated : Apr 11, 2018, 12:34 PM IST
ಕನ್ನಡ ಸಿನಿಮಾಕ್ಕೆ ಜಿಎಸ್'ಟಿ ಇಲ್ಲ

ಸಾರಾಂಶ

ಜಿಎಸ್‌ಟಿ ತೆರಿಗೆ ವ್ಯವಸ್ಥೆಯಿಂದ ಚಲನಚಿತ್ರ ರಂಗದ ಮೇಲೆ ತೆರಿಗೆ ಹೊರೆ ಹೆಚ್ಚಾಗಲಿದೆ. ಹೀಗಾಗಿ ಕನ್ನಡ ಚಿತ್ರಗಳ ಮೇಲೆ ಹೊರೆ ಕಡಿಮೆ ಮಾಡಲು ರಾಜ್ಯ ಸರ್ಕಾರದಿಂದ ಯಾವ ರೀತಿ ತೆರಿಗೆ ಮರುಪಾವತಿ ಮಾಡಬಹುದು ಎಂಬ ಬಗ್ಗೆ ಚರ್ಚಿಸಲಾಗುವುದು. ಒಟ್ಟಾರೆ ಕನ್ನಡ ಚಿತ್ರೋದ್ಯಮಕ್ಕೆ ಜಿಎಸ್‌ಟಿ ಹೊರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಬೆಂಗಳೂರು(ಜೂ.20): ಜಿಎಸ್‌ಟಿ ತೆರಿಗೆ ವ್ಯವಸ್ಥೆಯಿಂದ ಚಲನಚಿತ್ರ ರಂಗದ ಮೇಲೆ ತೆರಿಗೆ ಹೊರೆ ಹೆಚ್ಚಾಗಲಿದೆ. ಹೀಗಾಗಿ ಕನ್ನಡ ಚಿತ್ರಗಳ ಮೇಲೆ ಹೊರೆ ಕಡಿಮೆ ಮಾಡಲು ರಾಜ್ಯ ಸರ್ಕಾರದಿಂದ ಯಾವ ರೀತಿ ತೆರಿಗೆ ಮರುಪಾವತಿ ಮಾಡಬಹುದು ಎಂಬ ಬಗ್ಗೆ ಚರ್ಚಿಸಲಾಗುವುದು. ಒಟ್ಟಾರೆ ಕನ್ನಡ ಚಿತ್ರೋದ್ಯಮಕ್ಕೆ ಜಿಎಸ್‌ಟಿ ಹೊರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ವಿಧಾನಪರಿಷತ್‌ನಲ್ಲಿ ಜಿಎಸ್‌ಟಿ ವಿಧೇಯಕ-2017 ಮಂಡಿಸಿ ಮಾತನಾಡಿದ ಅವರು, ಕನ್ನಡ ಚಿತ್ರಗಳಿಗೆ ಸರ್ಕಾರದಿಂದ ತೆರಿಗೆ ವಿಧಿಸುತ್ತಿರಲಿಲ್ಲ. ಇದೀಗ ಜಿಎಸ್‌ಟಿಯಿಂದ ಚಿತ್ರರಂಗಕ್ಕೆ ಹಿನ್ನಡೆಯಾಗಲಿದೆ. 100 ರು.ಗಿಂತ ಹೆಚ್ಚಿರುವ ಟಿಕೆಟ್‌ಗೆ ಶೇ.28 ಹಾಗೂ 100 ರು.ಗಿಂತ ಕಡಿಮೆ ಬೆಲೆಯ ಟಿಕೆಟ್‌ಗೆ ಶೇ.18 ರಷ್ಟುತೆರಿಗೆ ವಿಧಿಸಲು ಜಿಎಸ್‌ಟಿಯಲ್ಲಿ ಪ್ರಸ್ತಾಪಿಸಲಾಗಿದೆ. ಜಿಎಸ್‌ಟಿ ಜುಲೈ 1ರಿಂದ ಜಾರಿಯಾಗಲಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಈ ತೆರಿಗೆ ಅನ್ವಯವಾಗಲಿದೆ.

ಈ ಮೊದಲು ರಾಜ್ಯ ಸರ್ಕಾರವು ಕನ್ನಡ ಚಿತ್ರಗಳಿಗೆ ತೆರಿಗೆ ರಿಯಾಯಿತಿ ನೀಡಿತ್ತು. ಇದೀಗ ಚಿತ್ರರಂಗಕ್ಕೆ ತೆರಿಗೆ ಹೊರೆಯಿಂದ ಮುಕ್ತಿ ನೀಡಲು ಸರ್ಕಾರದಿಂದ ಯಾವ ರೀತಿ ಮರು ಪಾವತಿ ಮಾಡಬಹುದು ಎಂಬ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಹೇಳಿದರು. ಈ ವೇಳೆ ಪರಿಷತ್‌ ಸದಸ್ಯೆ ಜಯಮಾಲಾ ಅವರು, ನಾನು ಈ ವಿಷಯವನ್ನು ಪ್ರಸ್ತಾಪಿಸಬೇಕು ಎಂದು ಬಂದಿದ್ದೆ. ನೀವೇ ಹೇಳು ತ್ತೀದ್ದೀರಿ, ಧನ್ಯವಾದ ಎಂದರು.

 

ಸಿದ್ದರಾಮಯ್ಯ, ಬೇಡ ಕುಳಿತುಕೊಳ್ಳಮ್ಮಾ. ಯಾರೂ ಹೇಳಬಾರದು ಎಂದೇ ನಾನು ಹೇಳುತ್ತಿದ್ದೇನೆ. ಚಿತ್ರರಂಗದ ಪರವಾಗಿ ನಾವು ಇದ್ದೇವೆ. ಈವರೆಗೆ ನಾವು ಮಾಡಿದ ಕೆಲಸಗಳಿಂದ ಚಿತ್ರರಂಗಕ್ಕೆ ಅನುಕೂಲ ಆಗಿಲ್ವಾ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಜಯಮಾಲಾ, ಖಂಡಿತ ತುಂಬಾ ಅನುಕೂಲ ಆಗಿದೆ. ಸರ್ಕಾರದ ನೆರವಿನಿಂದಾಗಿ ಈ ಮೊದಲು ವರ್ಷಕ್ಕೆ 70 ಬರುತ್ತಿದ್ದ ಕನ್ನಡ ಸಿನಿಮಾ ಈಗ 200 ರಷ್ಟಾಗಿದೆ. ಚಿತ್ರರಂಗ ಇನ್ನೂ ಬೆಳವಣಿಗೆ ಆಗಲು ಈ ತೆರಿಗೆ ಹೊರೆ ಇಳಿಸಬೇಕು ಎಂದು ಮನವಿ ಮಾಡಿದರು. ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಚಿತ್ರರಂಗದ ಬೆಳವಣಿಗೆಗೆ ನಾವು ಸಹಕಾರ ನೀಡಲು ಬದ್ಧವಾಗಿದ್ದೇವೆ. ಚಿತ್ರಗಳಿಗೆ ತೆರಿಗೆ ಮರುಪಾವತಿ ಹೇಗೆ ಮಾಡಬಹುದು ಎಂಬುದರ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: ಹಾರ್ಟ್‌ ಅಟ್ಯಾಕ್‌ ಆಗಿ ರಸ್ತೆಯಲ್ಲಿ ಬಿದ್ದ ವ್ಯಕ್ತಿ, ಪತ್ನಿಯ ಗೋಳಾಟ ಕೇಳಿಯೂ ನೆರವಿಗೆ ಬಾರದ ಜನ!
ಈ ಜನಾಂಗದಲ್ಲಿದೆ ವಿಚಿತ್ರ ಸಂಪ್ರದಾಯ: ಮದುವೆಗೂ ಮೊದಲು ವಧುವಿನ ಹಲ್ಲನ್ನು ಸುತ್ತಿಗೆಯಿಂದ ಕುಟ್ಟಿ ಉದುರಿಸ್ತಾರೆ