
ಬೆಂಗಳೂರು : ಉನ್ನತ ಶಿಕ್ಷಣ ಖಾತೆ ಬೇಡ ಎಂದು ಕಳೆದ 15 ದಿನಗಳಿಂದ ಪಟ್ಟು ಹಿಡಿದಿದ್ದ ಸಚಿವ ಜಿ.ಟಿ.ದೇವೇಗೌಡ ಅವರು ಅನಿವಾರ್ಯವಾಗಿ ಅದೇ ಖಾತೆಯನ್ನು ವಹಿಸಿಕೊಳ್ಳಲು ಮುಂದಾಗಿದ್ದಾರೆ.
ಕೊಟ್ಟಿರುವ ಖಾತೆ ಬಿಟ್ಟು ಬೇರೆ ಖಾತೆ ನೀಡಿದರೆ ಸಮ್ಮಿಶ್ರ ಸರ್ಕಾರದಲ್ಲಿ ಅದು ಅನಗತ್ಯ ಗೊಂದಲಕ್ಕೆ ಕಾರಣವಾದೀತು ಎಂಬ ಕಿವಿಮಾತು ಹೇಳುವ ಮೂಲಕ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರು ದೇವೇಗೌಡರನ್ನು ಒಪ್ಪಿಸುವಲ್ಲಿ ಗುರುವಾರ ಸಂಜೆ ಯಶಸ್ವಿಯಾಗಿದ್ದಾರೆ.
ಜೊತೆಗೆ, ಮೈಸೂರು ಜಿಲ್ಲೆಯ ಉಸ್ತುವಾರಿಯನ್ನೂ ನೀಡುವುದಾಗಿ ಭರವಸೆ ನೀಡಿದ್ದೂ ಜಿ.ಟಿ.ದೇವೇಗೌಡರ ಅತೃಪ್ತಿ ಶಮನ ಗೊಳಿಸುವಲ್ಲಿ ಕೆಲಸ ಮಾಡಿತು ಎಂದು ತಿಳಿದು ಬಂದಿದೆ. ಪರಿಣಾಮ, ವಿಧಾನಸೌಧದಲ್ಲಿ ತಮಗೆ ಹಂಚಿಕೆಯಾಗಿರುವ ಕೊಠಡಿಯಲ್ಲಿ ಶುಕ್ರವಾರ ಪೂಜೆ ಸಲ್ಲಿಸುವ ಮೂಲಕ ಅಧಿಕೃತವಾಗಿ ಪ್ರವೇಶ ಮಾಡಲಿದ್ದಾರೆ ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.