
ನೈನಿತಾಲ್ (ಫೆ.22): ಇಲ್ಲಿನ ಕಾರ್ಬೆಟ್ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹೆಚ್ಚುತ್ತಿರುವ ಹುಲಿ ಬೇಟೆಯನ್ನು ತಡೆಯುವ ನಿಟ್ಟಿನಲ್ಲಿ, ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಜನರು ಕಾಣಿಸಿಕೊಂಡರೆ ಕಂಡಲ್ಲಿ ಗುಂಡು ಹಾರಿಸುವ ಆಜ್ಞೆ ಹೊರಡಿಸಲಾಗಿದೆ. ಅಲ್ಲದೇ ಬೇಟೆಗಾರರ ಅಕ್ರಮ ಪ್ರವೇಶವನ್ನು ಪತ್ತೆಹಚ್ಚಲು ಎರಡು ಡ್ರೋನ್'ಗಳನ್ನು ಬಳಸಲಾಗುತ್ತಿದೆ.
ಸಂರಕ್ಷಿತ ಅರಣ್ಯ ಪ್ರದೇಶದ ದಕ್ಷಿಣ ಭಾಗದಲ್ಲಿ ಇತ್ತೀಚೆಗೆ ಬೇಟೆಗಾರರ ಹಾವಳಿ ಹೆಚ್ಚಿದ್ದು ವನ್ಯಮೃಗಗಳ ಸಂರಕ್ಷಣೆಗಾಗಿ ಅರಣ್ಯ ಇಲಾಖೆ ಈ ಕಠಿಣ ಕ್ರಮ ಕೈಗೊಂಡಿದೆ. ಇದಕ್ಕಾಗಿ 150 ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಅಲ್ಲದೆ ಅರಣ್ಯದಲ್ಲಿ ಪ್ರಾಣಿಗಳ ಚಲನವಲನದ ಮೇಲೆ ನಿಗಾ ಇಡಲು ಅಳವಡಿಸಲಾಗಿರುವ 388 ಗುಪ್ತ ಕ್ಯಾಮೆರಾಗಳ ಮೂಲಕವೂ ಬೇಟೆಗಾರರ ಮೇಲೆ ಕಣ್ಣಿಡಲಾಗಿದೆ ಎಂದು ಕಾರ್ಬೆಟ್ ಹುಲಿ ಸಂರಕ್ಷಿತ ಅರಣ್ಯ ಇಲಾಖೆ ನಿರ್ದೇಶಕ ಮಧುಕರ್ ಡಕಾಟೆ ತಿಳಿಸಿದ್ದಾರೆ.
ವನ್ಯಜೀವಿ ಸಂರಕ್ಷಣೆಗಾಗಿ ಈ ಹಿಂದೆ 2003ರ ಸರ್ಕಾರ ಹೊರಡಿಸಿದ್ದ ಆದೇಶದನ್ವಯವೇ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.