
ಗಾಂಧಿನಗರ(ಅ.17): ಬೊಪೋರ್ಸ್ ಹಗರಣದ ಕುರಿತು ಪ್ರಶ್ನೆ ಕೇಳಿದ್ದಕ್ಕೆ ರಿಪಬ್ಲಿಕ್ ಟಿವಿ ವರದಿಗಾರ್ತಿ ಮೇಲೆ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಭಾರತೀಶ ಮಾಧವಸಿನ್ಹಾ ಸೋಲಾಂಕಿ ಧಮ್ಕಿ ಹಾಕಿ ಹಲ್ಲೆ ನಡೆಸಿದ್ದಾರೆ.
1986ರಲ್ಲಿ ನಡೆದ ಬೊಪೋರ್ಸ್ ಹಗರಣದ ಅಸಲಿ ಮುಖವನ್ನು ರಿಪಬ್ಲಿಕ್ ಟಿವಿ ಬಯಲಿಗೆಳೆದಿದೆ. ಈ ಕುರಿತು ರಿಪಬ್ಲಿಕ್ ಟಿವಿ ವರದಿಗಾರ್ತಿ ಪ್ರೇಮಾ ಶ್ರಿದೇವಿ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಭಾರತೀಶ ಮಾಧವ ಸಿನ್ಹಾ ಸೋಲಾಂಕಿ ಅವರ ಸಂದರ್ಶನ ನಡೆಸಿದ್ದರು. ಹಗರಣದ ಕುರಿತು ಪ್ರಶ್ನೆಗಳನ್ನು ಕೇಳಿದಾಗ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಸೋಲಂಕಿ, ವರದಿಗಾರ್ತಿ ಪ್ರೇಮಾ ಶ್ರೀದೇವಿಗೆ ಧಮ್ಕಿ ಹಾಕಿದ್ದಾರೆ. ಅಷ್ಟೇ ಅಲ್ಲ. ಜೊತೆಗಿದ್ದ ಕಾಂಗ್ರೆಸ್ ಮುಖಂಡರು ವರದಿಗಾರ್ತಿ ಮೇಲೆ ಹಲ್ಲೆ ನಡೆಸಿ ಸಂದರ್ಶನ ಪೂಟೇಜ್ ಅನ್ನು ಡಿಲೀಟ್ ಮಾಡಿ ಹೊರ ಹೋಗುವಂತೆ ದೌರ್ಜನ್ಯ ಮೆರದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.