
ಪಾಂಪೋರ್, ಜಮ್ಮು-ಕಾಶ್ಮೀರ (ಅ.1!): ಜಮ್ಮು-ಕಾಶ್ಮೀರದ ಪಾಂಪೋರ್ನಲ್ಲಿ ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ಗುಂಡಿನ ಚಕಮಕಿ ತಡರಾತ್ರಿವರೆಗೆ ಮುಂದುವರೆದಿದೆ.
ಕಣಿವೆ ರಾಜ್ಯದ ರಾಜಧಾನಿ ಶ್ರೀನಗರದ ಪುಲ್ವಾಮಾ ಜಿಲ್ಲೆಯ ಪಾಂಪೋರ್'ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಿನ್ನೆ ಇಬ್ಬರು ಸೈನಿಕರು ಗಾಯಗೊಂಡಿದ್ದರು.
ಇಡಿಐ ಬಿಲ್ಡಿಂಗ್ನಲ್ಲಿ ಅಡಗಿ ಕುಳಿತಿರುವ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದರು. ಕಟ್ಟಡದಿಂದ ಉಗ್ರರು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ಭದ್ರತಾ ಪಡೆ ಕಟ್ಟಡವನ್ನು ಸುತ್ತುವರಿದಿದೆ.
ಕಟ್ಟಡದಲ್ಲಿ ಕಳೆದ ಫೆಬ್ರವರಿಯಲ್ಲಿ ಇದೇ ಕಟ್ಟಡದ ಮೇಲೆ ದಾಳಿ ನಡೆದಿತ್ತು. ದಾಳಿಯಲ್ಲಿ ಮೂವರು ಉಗ್ರರನ್ನು ಕೊಲ್ಲಲಾಗಿತ್ತು. ಅಲ್ಲದೇ ಮೂವರು ಭಾರತೀಯ ಯೋಧರು, ಓರ್ವ ನಾಗರಿಕ ಮೃತಪಟ್ಟಿದ್ದರು.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.