
ಗುರುಗ್ರಾಮ್(ಮಾ.23): ಮನೆ ಮುಂದೆ ಕ್ರಿಕೆಟ್ ಆಡಿದ ಕ್ಷುಲ್ಲಕ ಕಾರಣಕ್ಕೆ ಇಡೀ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಗುರುಗ್ರಾಮ್ ದಲ್ಲಿ ನಡೆದಿದೆ.
ಹುಡುಗರ ಗುಂಪೊಂದು ಮನೆ ಮುಂದೆ ಕ್ರಿಕೆಟ್ ಆಡುತ್ತಿದ್ದಾಗ ಅಲ್ಲಿಗೆ ಧಾವಿಸಿದ ಯುವಕರ ಗುಂಪೊಂದು, ಇಲ್ಲೇಕೆ ಕ್ರಿಕೆಟ್ ಆಡುತ್ತಿದ್ದೀರಿ ಪಾಕಿಸ್ತಾನಕ್ಕೆ ಹೋಗಿ ಆಡಿ ಎಂದು ಹೇಳಿ ಹಲ್ಲೆ ನಡೆಸಿದೆ.
ಕೂಡಲೇ ಮನೆಯೊಳಗೆ ನುಗ್ಗಿದ ಆಗುಂತಕ ಗುಂಪು, ಹಾಕಿ ಸ್ಟಿಕ್ ಮತ್ತು ಕಬ್ಬಿಣದ ರಾಡ್ ಗಳಿಂದ ಕುಟುಂಬದ ಮೇಲೆ ಹಲ್ಲೆ ನಡಿಸಿದೆ. ಮಹಿಳೆಯರು ಮಕ್ಕಳು ಎನ್ನದೇ ಕುಟುಂಬದ ಸದಸ್ಯರ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ.
ಇನ್ನು ಘಟನೆಯನ್ನು ತೀವ್ರವಾಗಿ ಖಂಡಿಸಿರುವ ದೆಹಲಿ ಸಿಎಂ ಅರವಿಮದ್ ಕೇಜ್ರಿವಾಲ್, ಹಿಟ್ಲರ್ ಹಾದಿಯಲ್ಲಿರುವ ಪ್ರಧಾನಿ ಮೋದಿ, ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇನ್ನು ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದ್ದು, ಗುರುಗ್ರಾಮ್ ದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.