
ಚಿಕ್ಕಮಗಳೂರು (ಜ.01): ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬ ಸಮೇತ ಇಂದು ಶೃಂಗೇರಿಗೆ ಆಗಮಿಸಿದ್ದಾರೆ. ಹೆಲಿಕ್ಯಾಪ್ಟರ್ ಮೂಲಕ ಪತ್ನಿ ಚನ್ನಮ್ಮ, ಪುತ್ರ ರೇವಣ್ಣ ಜೊತೆಯಲ್ಲಿ ಶೃಂಗೇರಿಗೆ ಆಗಮಿಸಿದ್ದಾರೆ.
ಜಗದ್ಗುರುಗಳಾದ ಭಾರತೀ ತೀರ್ಥ ಸ್ವಾಮೀಜಿ, ವಿಧುಶೇಖರ ಸ್ವಾಮೀಜಿ ಭೇಟಿ ಮಾಡಿ ಶಾರದಾಂಬೆಯ ದರ್ಶನ ಪಡೆದಿದ್ದಾರೆ. ನಾಳೆಯಿಂದ ಶ್ರೀ ಮಠದ 150 ಪುರೋಹಿತರ ನೇತೃತ್ವದಲ್ಲಿ ಅತಿರುದ್ರ ಮಹಾಯಾಗ 12 ದಿನ ನಡೆಯಲಿದೆ. ಜನವರಿ 14 ರಂದು ಮಹಾಯಾಗ ಪೂರ್ಣಾಹುತಿಯಾಗಲಿದೆ.
ಕುಟುಂಬ ಹಿತದೃಷ್ಟಿಯಿಂದ ನಡೆಯಲಿರುವ ಅತಿ ರುದ್ರಮಹಾ ಯಾಗದಲ್ಲಿ ಜನವರಿ 14 ರಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪೂರ್ಣಾಹುತಿಯಲ್ಲಿ ಭಾಗಯಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.