ನೆರೆ ಪೀಡಿತ ಪ್ರದೇಶಗಳಿಗೆ ಅನರ್ಹ ಶಾಸಕ ವಿಶ್ವನಾಥ್ ಭೇಟಿ

Published : Aug 10, 2019, 04:05 PM ISTUpdated : Aug 10, 2019, 04:44 PM IST
ನೆರೆ ಪೀಡಿತ ಪ್ರದೇಶಗಳಿಗೆ ಅನರ್ಹ ಶಾಸಕ ವಿಶ್ವನಾಥ್ ಭೇಟಿ

ಸಾರಾಂಶ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹರಾದ ಎಚ್.ವಿಶ್ವನಾಥ್ ಬಿಜೆಪಿ ಮುಖಂಡರೊಂದಿಗೆ ಪ್ರವಾಹ ಪೀಡಿತ ಕ್ಷೇತ್ರಗಳಲ್ಲಿ ಸಂಚರಿಸಿದ್ದಾರೆ. ಆ ಮೂಲಕ ತಮ್ಮನ್ನು ಆರಿಸಿರುವ ಜನರಿಗೆ ಸಹಕರಿಸಲು ಮುಂದಾಗಿದ್ದಾರೆ. 

ಮೈಸೂರು [ಆ.10]: ಜೆಡಿಎಸ್ ಅನರ್ಹ ಶಾಸಕ ಎಚ್. ವಿಶ್ವನಾಥ್ ತಮ್ಮನ್ನು ವಿಧಾನಸಭೆಗೆ ಆರಿಸಿ ಕಳುಹಿಸಿದ ಜನರು ದುಃಖ ಆಲಿಸಲು ಕ್ಷೇತ್ರದಲ್ಲಿ ಸಂಚರಿಸಿದ್ದಾರೆ. ಹುಣಸೂರು ವಿಧಾನಸಭಾ ವ್ಯಾಪ್ತಿಯಲ್ಲಿ ಲಕ್ಷ್ಣಣ ತೀರ್ಥ ನದಿ ಉಕ್ಕಿ ಹರಿಯುತ್ತಿದ್ದು, ನೆರೆಯಿಂದ ಜನರು ಪಡಬಾರದ ಪಾಡು ಪಡುತ್ತಿದ್ದಾರೆ. ಸಂತ್ರಸ್ತರ ಮನವಿ ಆಲಿಸಿದ್ದಾರೆ ವಿಶ್ವನಾಥ್.

ಜೆಡಿಎಸ್ ಶಾಸಕರಾಗಿ ಆಯ್ಕೆಯಾಗಿ ಅನರ್ಹರಾದ ಎಚ್. ವಿಶ್ವನಾಥ್ ಬಿಜೆಪಿ ಮುಖಂಡರ ಜೊತೆಯಲ್ಲಿಯೂ ಪ್ರವಾಹ ಪೀಡಿತ ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಿಶ್ವನಾಥ್ ಅವರ ಹುಣಸೂರಿನ ಮನೆ ಬಾಗಿಲಿಗೆ ಬಂದು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಕರೆದೊಯ್ದಿದ್ದಾರೆ. ಬಳಿಕ ವಿಶ್ವನಾಥ್ ಹಾಗೂ ಸಂಸದ ಪ್ರತಾಪ್ ಸಿಂಹ ಜಂಟಿಯಾಗಿ ಜಿಲ್ಲೆಯ ಪ್ರವಾಸ ಮಾಡಿದ್ದು, ಜನರ ಸಮಸ್ಯೆ ಆಲಿಸಿದ್ದಾರೆ.

ವಿಶ್ವನಾಥ್ ಅವರು ದೋಸ್ತಿ ಸರ್ಕಾರದ ಆಡಳಿತದಿಂದ ಅಸಮಾಧಾನಗೊಂಡು ಜೆಡಿಎಸ್ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ತೆರಳಿದ್ದರು. ಬಳಿಕ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್, ವಿಶ್ವನಾಥ್ ಅವರನ್ನು ಅನರ್ಹರನ್ನಾಗಿಸಿದರು. ಅದಾದ ಬಳಿಕ ಅವರನ್ನು ಜಿಡಿಎಸ್ ಉಚ್ಛಾಟಿಸಿದೆ. ಇದೀಗ ಬಿಜೆಪಿ ಮುಖಂಡರ ಜೊತೆ ಸಂಚರಿಸುತ್ತಿದ್ದು, ಹಲವು ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿದೆ.. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ತಮಿಳು ಚಿತ್ರದಲ್ಲಿ ಕನ್ನಡ ಹಾಡು ಬಳಸಿದ್ದಕ್ಕೆ ದಂಡ, ಒಟಿಟಿ ರಿಲೀಸ್‌ಗೂ ಮುನ್ನ 30 ಲಕ್ಷ ಠೇವಣಿ ಇಡಿ ಎಂದ ಕೋರ್ಟ್‌!