
ಬೆಂಗಳೂರು(ಮಾ.20): ಪಕ್ಷದಲ್ಲಿ ಕಡೆಗಣಿಸಲಾಗುತ್ತಿರುವ ಕಾಂಗ್ರೆಸ್ ಹಿರಿಯ ಮುಖಂಡ ಹೆಚ್.ವಿಶ್ವನಾಥ್ ಮಾತೃಪಕ್ಷ ತೊರೆದು ಜೆಡಿಎಸ್'ಗೆ ಸೇರ್ತಾರಾ? ಅಂತಹದೊಂದು ಸುದ್ದಿ ಇತ್ತೀಚಿನ ದಿನಗಳಲ್ಲಿ ಹಲವು ಕಡೆ ಹರಿದಾಡುತ್ತಿದೆ.
ಅಲ್ಲದೆ ಈ ಬಗ್ಗೆ ನಿನ್ನೆಯಷ್ಟೆ ಜೆಡಿಎಸ್ ಸಂಸದ ಸಿ.ಎಸ್. ಪುಟ್ಟರಾಜು ಸುದ್ದಿಗಾರರೊಂದಿಗೆ ಮಾತನಾಡಿ, ವಿಶ್ವನಾಥ್ ಅವರನ್ನು ನಾನು ನಮ್ಮ ಪಕ್ಷಕ್ಕೆ ಆಹ್ವಾನಿಸಿದ್ದೇನೆ. ಅವರಿಗೂ ಜೆಡಿಎಸ್'ಗೂ ಸೇರ್ಪಡೆ ಬಗ್ಗೆ ಒಲವು ಇದೆ. ಸಮಯ ಬಂದಾಗ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದ್ದಾರೆ' ಎಂದು ತಿಳಿಸಿದ್ದಾರೆ.
ಈ ಬಗ್ಗೆ ಸುವರ್ಣ ನ್ಯೂಸ್'ನೊಂದಿಗೆ ಸ್ವತಃ ಸ್ಪಷ್ಟಿಕರಣ ನೀಡಿರುವ ಹೆಚ್.ವಿಶ್ವನಾಥ್ ಅವರು, ಜೆಡಿಎಸ್ನಿಂದ ಆಹ್ವಾನ ಬಂದಿಲ್ಲ. ಜೆಡಿಎಸ್ಗೆ ಸೇರಿ ಎಂದು ನನಗೆ ಯಾರೂ ಆಹ್ವಾನ ನೀಡಿಲ್ಲ. ಜೆಡಿಎಸ್ಗೆ ಸೇರುವ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ. ರಾಜಕಾರಣದಲ್ಲಿ ಇದೆಲ್ಲಾ ಸಹಜ, ಮುಂದೆ ನೋಡೋಣ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.