
ನವದೆಹಲಿ (ಅ.17): ಆರು಼ಷಿ-ಹೇಮರಾಜ್ ಜೋಡಿ ಕೊಲೆ ಪ್ರಕರಣದಲ್ಲಿ 4 ವರ್ಷಗಳ ಕಾಲ ಜೈಲು ಪಾಲಾಗಿದ್ದ ಡಾ. ರಾಜೇಶ್ ಮತ್ತು ನೂಪುರ್ ತಲ್ವಾರ್ ದಂಪತಿಗಳನ್ನು ಗಾಜಿಯಾ ಬಾದ್ ದಾಸ್ನಾ ಜೈಲಿನಿಂದ ಇಂದು ಬೀಳ್ಕೊಡಲಾಯಿತು.
2013 ರಲ್ಲಿ ನಡೆದ ಅರುಷಿ-ಹೇಮರಾಜ್ ಜೋಡಿ ಹತ್ಯೆ ಪ್ರಕರಣದಲ್ಲಿ ತಲ್ವಾರ್ ದಂಪತಿಗಳಿಗೆ ತ್ವರಿತ ನ್ಯಾಯಾಲಯ ಡಾಸ್ನಾ ಜಿಲ್ಲಾ ಜೈಲಿಗೆ ಕಳುಹಿಸಿತ್ತು. ಮೊನ್ನೆ ಇದರ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್ ಅವರನ್ನು ಖುಲಾಸೆಗೊಳಿಸಿದೆ. ಪ್ರಾಥಮಿಕ ತನಿಖಾ ವರದಿ ಸಂದರ್ಭಕ್ಕೆ ತಕ್ಕನಾಗಿದೆ. ಅದನ್ನು ಪರಿಗಣಿಸಲಾಗುವುದಿಲ್ಲ ಎಂದು ಅಲಹಬಾದ್ ಹೈಕೋರ್ಟ್ ತೀರ್ಪು ನೀಡಿದೆ.
ಜೈಲಿನಿಲ್ಲಿರುವ ಸಹ ಖೈದಿಗಳಿಗೆ ಪುಸ್ತಕಗಳು, ಬಟ್ಟೆ, ಶೂ ಜೊತೆ ಇತ್ಯಾದಿಗಳನ್ನು ನೀಡಿದ್ದಾರೆ. ತಲ್ವಾರ್ ದಂಪತಿಗಳ ನಡೆಯ ಬಗ್ಗೆ ಸಹಖೈದಿಗಳು ಮೆಚ್ಚುಗೆ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.