'ಅವ್ರನ್ನೆಲ್ಲಾ ನೇಣಿಗೇರಿಸಿ: ಬಾಬಾ ರಾಮದೇವ್..!

Published : Jun 20, 2018, 03:29 PM ISTUpdated : Jun 20, 2018, 03:46 PM IST
'ಅವ್ರನ್ನೆಲ್ಲಾ ನೇಣಿಗೇರಿಸಿ: ಬಾಬಾ ರಾಮದೇವ್..!

ಸಾರಾಂಶ

ತಪ್ಪು ಮಾಡಿದ ಸ್ವಯಂ ಘೋಷಿತ ದೇವಮಾನವರನ್ನು ಗಲ್ಲಿಗೇರಿಸಿ ಬಾಬಾ ಆದರೆನಂತೆ ಕಾನೂನು ಎಲ್ಲರಿಗೂ ಒಂದೇ ರಾಜಸ್ಥಾನದಲ್ಲಿ ಬಾಬಾ ರಾಮದೇವ್ ಹೇಳಿಕೆ ಕೇಸರಿ ಬಟ್ಟೆ ಧಾರ್ಮಿಕ ನಾಯಕರ ಮಾನದಂಡವಲ್ಲ 

ಕೋಟಾ(ಜೂ.20): ಅಕ್ರಮ ಚಟುವಟಿಕೆಗಳಲ್ಲಿ ಭಾಗಿಗಳಾಗಿರುವ ಸ್ವಯಂ ಘೋಷಿತ ದೇವಮಾನವರು, ಬಾಬಾಗಳನ್ನು ಗಲ್ಲಿಗೇರಿಸಬೇಕು ಎಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ. ರಾಜಸ್ಥಾನದ ಕೋಟಾದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ರಾಮದೇವ್, 'ಮಿತಿ ಮೀರುವವರನ್ನು ಜೈಲಿಗಟ್ಟುವುದು ಮಾತ್ರವಲ್ಲ, ಮರಣದಂಡನೆ ಶಿಕ್ಷೆ ವಿಧಿಸಬೇಕು' ಎಂದು ಹೇಳಿದರು. 

ಕೇಸರಿ ಬಟ್ಟೆಯೊಂದೇ ಧಾರ್ಮಿಕ ನಾಯಕರ ಮಾನದಂಡವಾಗಬಾರದು, ಎಲ್ಲಾ ಕೆಲಸಗಳಿಗೆ ಒಂದು ಶಿಷ್ಟಾಚಾರವಿದೆ, ಅದರಂತೆ ಅದರದೇ ಆದ ಮಿತಿಗಳೂ ಇವೆ. ಬಾಬಾ, ಯೋಗಿಗಳಿಗೆ ಸಹ ಇದು ಅನ್ವಯ ಎಂದು ರಾಮದೇವ್ ಅಭಿಪ್ರಾಯಪಟ್ಟರು.

ಕೇಸರಿ ಬಣ್ಣದ ಬಟ್ಟೆ ಧರಿಸಿದ ಮಾತ್ರಕ್ಕೆ ಯಾರೂ ದೇವಮಾನವರಾಗುವುದಿಲ್ಲ ಎಂದಿರುವ ರಾಮದೇವ್, ತಪ್ಪು ಮಾಡಿದವರು ಯಾರೇ ಆದರೂ ಅವರಿಗೆ ಸೂಕ್ತ ಶಿಕ್ಷೆಯಾಗಲೇಬೇಕು ಎಂದು ಹೇಳಿದರು. ಸ್ವಯಂಘೊಷಿತ ದೇವಮಾನವನೊಬ್ಬರ ಮೇಲೆ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಮದೇವ್ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bidadi Township row: ಬಿಡದಿ ಟೌನ್‌ಶಿಪ್‌ಗೂ ಎಚ್‌ಡಿಕೆಗೂ ಸಂಬಂಧ ಇಲ್ಲ, ಚರ್ಚೆ ಬೇಕಿಲ್ಲ - ಸಿಎಂ ಡಿಕೆಶಿ
State News Live: ರಾಜ್ಯದಲ್ಲೀಗ 150 ವರ್ಷದಲ್ಲೇ ಭೀಕರ ಬರಗಾಲದ ಆತಂಕ